ಅಯೋಧ್ಯೆ : ಭವ್ಯವಾದ ಶ್ರೀರಾಮಮಂದಿರದ ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ (ರಾಮಲಲ್ಲಾ) ನೂತನ ವಿಗ್ರಹವನ್ನು ಗುರುವಾರ ಇರಿಸಲಾಗಿದೆ.
ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರು ಸಮಗ್ರ ಪ್ರಕ್ರಿಯೆಯ ನಂತರ ವಿಗ್ರಹವನ್ನು ಆಯ್ಕೆ ಮಾಡಿದ್ದಾರೆ. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಿಂದ ಕೆತ್ತನೆ ಮಾಡಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಬಿಗಿ ಭದ್ರತೆಯ ಮೂಲಕ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು.
ಗುರುವಾರ ಸಂಜೆ ವೇಳೆಗೆ ಧಾರ್ಮಿಕ ವಿಧಿ ವಿಧಾನಗಳು ನೇರವೇರಿದ ಬಳಿಕ ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ ರಾಮನ 51 ಇಂಚು ಎತ್ತರದ ಬಾಲರಾಮನ ಮೂರ್ತಿಯನ್ನ ಪ್ರತಿಷ್ಠಾಪಿಸಲಾಯಿತು. ಜನವರಿ 22ರಂದು ರಾಮಭಕ್ತರು ಇದರ ರೂಪ ಕಣ್ತುಂಬಿಕೊಳ್ಳುವ ಸಮಯ ಮತ್ತಷ್ಟು ಸನ್ನಿಹಿತವಾದಂತಾಗಿದೆ. ಅಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…