Featured

ಅಯೋಧ್ಯೆ ತೀರ್ಪು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ , ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ : ಪೇಜಾವರ ಶ್ರೀ -Vishwanews24

ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ ಬಂದಲ್ಲಿ ಪ್ರತಿಭಟನೆಗಿಳಿಯದೆ ಶಾಂತವಾಗಿ ಸ್ವೀಕರಿಸುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಯವರು ಜನರಿಗೆ ಮನವಿ ಮಾಡಿದ್ದಾರೆ.

ಅವರು ಗುರುವಾರ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸದ್ಯವೇ ಅಯೋಧ್ಯೇಯ ತೀರ್ಪು ಹೊರಬರಲಿದ್ದು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ ಅಲ್ಲದೆ ಯಾವುದೇ ರೀತಿಯಲ್ಲಿ ಬೀದಿಗಿಳಿದು ಮೆರವಣಿಗೆ ಮಾಡಬಾರದು. ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು ಮತ್ತು ದೇವಸ್ಥಾನ, ಮಠದ ಒಳಗೆ ಹರ್ಷಾಚರಣೆ ಮಾಡಿದರೆ ಸಾಕು ಎಂದು ಅವರು ಹೇಳಿದ್ದಾರೆ.

ನವೆಂಬರ್ 15ರೊಳಗೆ ತೀರ್ಪು ನೀಡುವ ಸಾಧ್ಯತೆ ಇದ್ದು ರಾಮಮಂದಿರದ ಕಡೆಗೆ ತೀರ್ಪು ಬರುತ್ತದೆ ಎಂಬ ಭಾವನೆಯಿದೆ. ಯಾಕೆಂದರೆ ಕೋರ್ಟ್‍ನ ತೀರ್ಪು ಸಂವಿಧಾನ ಬದ್ದವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಲ್ಲಿ ನನ್ನ ಮನವಿ. ವಿಜಯೋತ್ಸವವನ್ನು ಬೇಕಾದರೆ ಭಕ್ತರು ತಮ್ಮ ಮನೆಗಳಲ್ಲಿ ಪೂಜೆ, ಭಜನೆ ಮಾಡುವ ಮೂಲಕ ಆಚರಿಸಲಿ. ಈ ಮನವಿ ಎಲ್ಲಾ ಹಿಂದು ಪರ ಸಂಘಟನೆಗಳಿಗೂ ಅನ್ವಯಿಸುತ್ತದೆ ಎಂದು ಎಚ್ಚರಿಸಿದ್ದಾರೆ

ಅದೇ ರೀತಿಯಲ್ಲಿ ಮುಸ್ಲಿಂ ಬಾಂಧವರೂ ಕೂಡಾ ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು. ಪರ ಅಥವಾ ವಿರುದ್ಧ ತೀರ್ಪು ಬಂದರೆ ಅತಿರೇಕದ ವರ್ತನೆ ಬೇಡ ಹಿಂದೂಗಳು- ಮುಸಲ್ಮಾನರು ಸಮಾನವಾಗಿ ತೀರ್ಪನ್ನು ಸ್ವೀಕರಿಸಿ ಕರ್ನಾಟಕ , ಕರಾವಳಿ ಜನ ಶಾಂತವಾಗಿರಬೇಕು ಎಂದರು.

ತೀರ್ಪು ಅನುಕೂಲವಾಗಿ ಬರುತ್ತದೆ ಎಂದು ಭಾವಿಸಿದ್ದು, ಒಂದು ವಾರದ ಒಳಗೆ ರಾಮಮಂದಿರ ತೀರ್ಪು ಬರಬಹುದು. ಸಂವಿಧಾನ, ಸುಪ್ರೀಂ ಕೋರ್ಟ್ ಗೆ ದೇಶದ ಜನ ಗೌರವ ಕೊಡಬೇಕು ಸಂಘರ್ಷ ಪ್ರತಿಭಟನೆಗೆ ಯಾರೂ ಅವಕಾಶ ಮಾಡಿಕೊಡಬಾರದು. ರವಿಶಂಕರ್ ಗುರೂಜಿ ಕೂಡಾ ಶಾಂತಿ ಕಾಪಾಡಲು ಕರೆ ಕೊಟ್ಟಿದ್ದಾರೆ ಮಂದಿರ ವಿಚಾರದಲ್ಲಿ ಅಂತರಂಗದ ಸಂಧಾನ ಆಗಿದೆ ಎಂಬ ಮಾಹಿತಿಯಿದೆ ಎಂದು ಸ್ವಾಮೀಜಿ ಹೇಳಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

3 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

4 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago