Featured

ಅಯೋಧ್ಯೆ ತೀರ್ಪು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ , ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ : ಪೇಜಾವರ ಶ್ರೀ -Vishwanews24

ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ ಬಂದಲ್ಲಿ ಪ್ರತಿಭಟನೆಗಿಳಿಯದೆ ಶಾಂತವಾಗಿ ಸ್ವೀಕರಿಸುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಯವರು ಜನರಿಗೆ ಮನವಿ ಮಾಡಿದ್ದಾರೆ.

ಅವರು ಗುರುವಾರ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸದ್ಯವೇ ಅಯೋಧ್ಯೇಯ ತೀರ್ಪು ಹೊರಬರಲಿದ್ದು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ ಅಲ್ಲದೆ ಯಾವುದೇ ರೀತಿಯಲ್ಲಿ ಬೀದಿಗಿಳಿದು ಮೆರವಣಿಗೆ ಮಾಡಬಾರದು. ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು ಮತ್ತು ದೇವಸ್ಥಾನ, ಮಠದ ಒಳಗೆ ಹರ್ಷಾಚರಣೆ ಮಾಡಿದರೆ ಸಾಕು ಎಂದು ಅವರು ಹೇಳಿದ್ದಾರೆ.

ನವೆಂಬರ್ 15ರೊಳಗೆ ತೀರ್ಪು ನೀಡುವ ಸಾಧ್ಯತೆ ಇದ್ದು ರಾಮಮಂದಿರದ ಕಡೆಗೆ ತೀರ್ಪು ಬರುತ್ತದೆ ಎಂಬ ಭಾವನೆಯಿದೆ. ಯಾಕೆಂದರೆ ಕೋರ್ಟ್‍ನ ತೀರ್ಪು ಸಂವಿಧಾನ ಬದ್ದವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಲ್ಲಿ ನನ್ನ ಮನವಿ. ವಿಜಯೋತ್ಸವವನ್ನು ಬೇಕಾದರೆ ಭಕ್ತರು ತಮ್ಮ ಮನೆಗಳಲ್ಲಿ ಪೂಜೆ, ಭಜನೆ ಮಾಡುವ ಮೂಲಕ ಆಚರಿಸಲಿ. ಈ ಮನವಿ ಎಲ್ಲಾ ಹಿಂದು ಪರ ಸಂಘಟನೆಗಳಿಗೂ ಅನ್ವಯಿಸುತ್ತದೆ ಎಂದು ಎಚ್ಚರಿಸಿದ್ದಾರೆ

ಅದೇ ರೀತಿಯಲ್ಲಿ ಮುಸ್ಲಿಂ ಬಾಂಧವರೂ ಕೂಡಾ ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು. ಪರ ಅಥವಾ ವಿರುದ್ಧ ತೀರ್ಪು ಬಂದರೆ ಅತಿರೇಕದ ವರ್ತನೆ ಬೇಡ ಹಿಂದೂಗಳು- ಮುಸಲ್ಮಾನರು ಸಮಾನವಾಗಿ ತೀರ್ಪನ್ನು ಸ್ವೀಕರಿಸಿ ಕರ್ನಾಟಕ , ಕರಾವಳಿ ಜನ ಶಾಂತವಾಗಿರಬೇಕು ಎಂದರು.

ತೀರ್ಪು ಅನುಕೂಲವಾಗಿ ಬರುತ್ತದೆ ಎಂದು ಭಾವಿಸಿದ್ದು, ಒಂದು ವಾರದ ಒಳಗೆ ರಾಮಮಂದಿರ ತೀರ್ಪು ಬರಬಹುದು. ಸಂವಿಧಾನ, ಸುಪ್ರೀಂ ಕೋರ್ಟ್ ಗೆ ದೇಶದ ಜನ ಗೌರವ ಕೊಡಬೇಕು ಸಂಘರ್ಷ ಪ್ರತಿಭಟನೆಗೆ ಯಾರೂ ಅವಕಾಶ ಮಾಡಿಕೊಡಬಾರದು. ರವಿಶಂಕರ್ ಗುರೂಜಿ ಕೂಡಾ ಶಾಂತಿ ಕಾಪಾಡಲು ಕರೆ ಕೊಟ್ಟಿದ್ದಾರೆ ಮಂದಿರ ವಿಚಾರದಲ್ಲಿ ಅಂತರಂಗದ ಸಂಧಾನ ಆಗಿದೆ ಎಂಬ ಮಾಹಿತಿಯಿದೆ ಎಂದು ಸ್ವಾಮೀಜಿ ಹೇಳಿದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago