ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ ಬಂದಲ್ಲಿ ಪ್ರತಿಭಟನೆಗಿಳಿಯದೆ ಶಾಂತವಾಗಿ ಸ್ವೀಕರಿಸುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಯವರು ಜನರಿಗೆ ಮನವಿ ಮಾಡಿದ್ದಾರೆ.
ಅವರು ಗುರುವಾರ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸದ್ಯವೇ ಅಯೋಧ್ಯೇಯ ತೀರ್ಪು ಹೊರಬರಲಿದ್ದು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ ಅಲ್ಲದೆ ಯಾವುದೇ ರೀತಿಯಲ್ಲಿ ಬೀದಿಗಿಳಿದು ಮೆರವಣಿಗೆ ಮಾಡಬಾರದು. ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು ಮತ್ತು ದೇವಸ್ಥಾನ, ಮಠದ ಒಳಗೆ ಹರ್ಷಾಚರಣೆ ಮಾಡಿದರೆ ಸಾಕು ಎಂದು ಅವರು ಹೇಳಿದ್ದಾರೆ.
ನವೆಂಬರ್ 15ರೊಳಗೆ ತೀರ್ಪು ನೀಡುವ ಸಾಧ್ಯತೆ ಇದ್ದು ರಾಮಮಂದಿರದ ಕಡೆಗೆ ತೀರ್ಪು ಬರುತ್ತದೆ ಎಂಬ ಭಾವನೆಯಿದೆ. ಯಾಕೆಂದರೆ ಕೋರ್ಟ್ನ ತೀರ್ಪು ಸಂವಿಧಾನ ಬದ್ದವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಲ್ಲಿ ನನ್ನ ಮನವಿ. ವಿಜಯೋತ್ಸವವನ್ನು ಬೇಕಾದರೆ ಭಕ್ತರು ತಮ್ಮ ಮನೆಗಳಲ್ಲಿ ಪೂಜೆ, ಭಜನೆ ಮಾಡುವ ಮೂಲಕ ಆಚರಿಸಲಿ. ಈ ಮನವಿ ಎಲ್ಲಾ ಹಿಂದು ಪರ ಸಂಘಟನೆಗಳಿಗೂ ಅನ್ವಯಿಸುತ್ತದೆ ಎಂದು ಎಚ್ಚರಿಸಿದ್ದಾರೆ
ಅದೇ ರೀತಿಯಲ್ಲಿ ಮುಸ್ಲಿಂ ಬಾಂಧವರೂ ಕೂಡಾ ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು. ಪರ ಅಥವಾ ವಿರುದ್ಧ ತೀರ್ಪು ಬಂದರೆ ಅತಿರೇಕದ ವರ್ತನೆ ಬೇಡ ಹಿಂದೂಗಳು- ಮುಸಲ್ಮಾನರು ಸಮಾನವಾಗಿ ತೀರ್ಪನ್ನು ಸ್ವೀಕರಿಸಿ ಕರ್ನಾಟಕ , ಕರಾವಳಿ ಜನ ಶಾಂತವಾಗಿರಬೇಕು ಎಂದರು.
ತೀರ್ಪು ಅನುಕೂಲವಾಗಿ ಬರುತ್ತದೆ ಎಂದು ಭಾವಿಸಿದ್ದು, ಒಂದು ವಾರದ ಒಳಗೆ ರಾಮಮಂದಿರ ತೀರ್ಪು ಬರಬಹುದು. ಸಂವಿಧಾನ, ಸುಪ್ರೀಂ ಕೋರ್ಟ್ ಗೆ ದೇಶದ ಜನ ಗೌರವ ಕೊಡಬೇಕು ಸಂಘರ್ಷ ಪ್ರತಿಭಟನೆಗೆ ಯಾರೂ ಅವಕಾಶ ಮಾಡಿಕೊಡಬಾರದು. ರವಿಶಂಕರ್ ಗುರೂಜಿ ಕೂಡಾ ಶಾಂತಿ ಕಾಪಾಡಲು ಕರೆ ಕೊಟ್ಟಿದ್ದಾರೆ ಮಂದಿರ ವಿಚಾರದಲ್ಲಿ ಅಂತರಂಗದ ಸಂಧಾನ ಆಗಿದೆ ಎಂಬ ಮಾಹಿತಿಯಿದೆ ಎಂದು ಸ್ವಾಮೀಜಿ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…