Featured

ಅಯೋಧ್ಯೆ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಒದಗಿಸಿಕೊಟ್ಟಿದೆ : ಪೇಜಾವರ ಶ್ರೀ -Vishwanews24

ಉಡುಪಿ,: ಇಂದು ಬೆಳಗ್ಗೆ ಅಂತಿಮ ಅಯೋಧ್ಯೆ ತೀರ್ಪು ಪ್ರಕಟಿಸಿದ್ದು, “ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು” ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ ಪೇಜಾವರ ಶ್ರೀಗಳು.

ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, “ಸುಪ್ರಿಂ ಕೋರ್ಟಿನ ನ್ಯಾಯಪೀಠವು ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು. ನನಗೆ ವೈಯಕ್ತಿಕವಾಗಿ ತೀರ್ಪು ಸಮ್ಮತವಾಗಿದೆ. ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಹಾಗಾಗಿ ಈ ತೀರ್ಪು ಸರ್ವಸಮ್ಮತವಿದೆ” ಎಂದಿದ್ದಾರೆ.

“ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ, ಮುಸಲ್ಮಾನರಿಗೆ ಮಸೀದಿಗೆ ಜಾಗ ಮುಖ್ಯ. ಈ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಒದಗಿಸಿಕೊಟ್ಟಿದೆ. ಹಿಂದೂ ಮುಸಲ್ಮಾನರು ಒಟ್ಟು ಸೇರಿ ಸೂಕ್ತ ಸ್ಥಳವನ್ನು ಮಸೀದಿಗೆ ಕೊಡಬೇಕು, ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಕರಿಸಬೇಕು. ಮಂದಿರ ನಿರ್ಮಾಣ ವಿಚಾರದಲ್ಲಿ ಮುಸ್ಲಿಮರೂ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

“ತೀರ್ಪು ಪ್ರಕಟ ವಿಚಾರದಲ್ಲಿ ವಿಜಯೋತ್ಸವ, ಮೆರವಣಿಗೆ ಬೇಡ ಎಂದು ನಿನ್ನೆಯೇ ಹೇಳಿದ್ದೆ. ಈಗಲೂ ಅದನ್ನೇ ಪುನರುಚ್ಚರಿಸುವೆ. ಹಿಂದೂಗಳು, ಮುಸಲ್ಮಾನರು ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಿ. ನನ್ನ ಈ ಇಳಿ ವಯಸ್ಸಿನಲ್ಲಿ ಈ ತೀರ್ಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ, ವೈಯಕ್ತಿಕವಾಗಿ ಸಂತೋಷವಾಗಿದೆ” ಎಂದಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago