ಉಡುಪಿ,: ಇಂದು ಬೆಳಗ್ಗೆ ಅಂತಿಮ ಅಯೋಧ್ಯೆ ತೀರ್ಪು ಪ್ರಕಟಿಸಿದ್ದು, “ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು” ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ ಪೇಜಾವರ ಶ್ರೀಗಳು.
ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, “ಸುಪ್ರಿಂ ಕೋರ್ಟಿನ ನ್ಯಾಯಪೀಠವು ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು. ನನಗೆ ವೈಯಕ್ತಿಕವಾಗಿ ತೀರ್ಪು ಸಮ್ಮತವಾಗಿದೆ. ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಹಾಗಾಗಿ ಈ ತೀರ್ಪು ಸರ್ವಸಮ್ಮತವಿದೆ” ಎಂದಿದ್ದಾರೆ.
“ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ, ಮುಸಲ್ಮಾನರಿಗೆ ಮಸೀದಿಗೆ ಜಾಗ ಮುಖ್ಯ. ಈ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಒದಗಿಸಿಕೊಟ್ಟಿದೆ. ಹಿಂದೂ ಮುಸಲ್ಮಾನರು ಒಟ್ಟು ಸೇರಿ ಸೂಕ್ತ ಸ್ಥಳವನ್ನು ಮಸೀದಿಗೆ ಕೊಡಬೇಕು, ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಕರಿಸಬೇಕು. ಮಂದಿರ ನಿರ್ಮಾಣ ವಿಚಾರದಲ್ಲಿ ಮುಸ್ಲಿಮರೂ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
“ತೀರ್ಪು ಪ್ರಕಟ ವಿಚಾರದಲ್ಲಿ ವಿಜಯೋತ್ಸವ, ಮೆರವಣಿಗೆ ಬೇಡ ಎಂದು ನಿನ್ನೆಯೇ ಹೇಳಿದ್ದೆ. ಈಗಲೂ ಅದನ್ನೇ ಪುನರುಚ್ಚರಿಸುವೆ. ಹಿಂದೂಗಳು, ಮುಸಲ್ಮಾನರು ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಿ. ನನ್ನ ಈ ಇಳಿ ವಯಸ್ಸಿನಲ್ಲಿ ಈ ತೀರ್ಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ, ವೈಯಕ್ತಿಕವಾಗಿ ಸಂತೋಷವಾಗಿದೆ” ಎಂದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…