ಉಡುಪಿ,: ಇಂದು ಬೆಳಗ್ಗೆ ಅಂತಿಮ ಅಯೋಧ್ಯೆ ತೀರ್ಪು ಪ್ರಕಟಿಸಿದ್ದು, “ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು” ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ ಪೇಜಾವರ ಶ್ರೀಗಳು.
ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, “ಸುಪ್ರಿಂ ಕೋರ್ಟಿನ ನ್ಯಾಯಪೀಠವು ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು. ನನಗೆ ವೈಯಕ್ತಿಕವಾಗಿ ತೀರ್ಪು ಸಮ್ಮತವಾಗಿದೆ. ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಹಾಗಾಗಿ ಈ ತೀರ್ಪು ಸರ್ವಸಮ್ಮತವಿದೆ” ಎಂದಿದ್ದಾರೆ.
“ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ, ಮುಸಲ್ಮಾನರಿಗೆ ಮಸೀದಿಗೆ ಜಾಗ ಮುಖ್ಯ. ಈ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಒದಗಿಸಿಕೊಟ್ಟಿದೆ. ಹಿಂದೂ ಮುಸಲ್ಮಾನರು ಒಟ್ಟು ಸೇರಿ ಸೂಕ್ತ ಸ್ಥಳವನ್ನು ಮಸೀದಿಗೆ ಕೊಡಬೇಕು, ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಕರಿಸಬೇಕು. ಮಂದಿರ ನಿರ್ಮಾಣ ವಿಚಾರದಲ್ಲಿ ಮುಸ್ಲಿಮರೂ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
“ತೀರ್ಪು ಪ್ರಕಟ ವಿಚಾರದಲ್ಲಿ ವಿಜಯೋತ್ಸವ, ಮೆರವಣಿಗೆ ಬೇಡ ಎಂದು ನಿನ್ನೆಯೇ ಹೇಳಿದ್ದೆ. ಈಗಲೂ ಅದನ್ನೇ ಪುನರುಚ್ಚರಿಸುವೆ. ಹಿಂದೂಗಳು, ಮುಸಲ್ಮಾನರು ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಿ. ನನ್ನ ಈ ಇಳಿ ವಯಸ್ಸಿನಲ್ಲಿ ಈ ತೀರ್ಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ, ವೈಯಕ್ತಿಕವಾಗಿ ಸಂತೋಷವಾಗಿದೆ” ಎಂದಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…