Featured

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ

ಬೆಳಗಾವಿ: ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಘೋಷಿಸಿದ್ದಾರೆ. ಇವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ ಮತ್ತು ಕಾಣಿಕೆ ಪೆಟ್ಟಿಗೆ, ನಗದು ಮತ್ತು ದೇಣಿಗೆ ಎಣಿಕೆಯ ಮೇಲೆ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರ ದಲ್ಲಿ ನಡೆದ ನಿಧಿ ಕಳ್ಳತನ ಪ್ರಕರಣದ ಕುರಿತು ನಡೆಯುತ್ತಿರುವ ವಿವಾದದ ಮಧ್ಯೆ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ. ಈ ಘಟನೆಯು ಅವಮಾನಕರವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಶಿವಕುಮಾರ್ ಹೇಳಿದರು.

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ ಎಂದ ಡಿಕೆಶಿ
ʼರಾಮ ಮಂದಿರದಲ್ಲಿ ಇತ್ತೀಚಿನ ಬೆಳವಣಿಗೆಗಳು ನಮಗೆಲ್ಲರಿಗೂ ಅಗೌರವವನ್ನುಂಟುಮಾಡುತ್ತವೆ. ಭಕ್ತಿಯಿಂದ, ನೀವೆಲ್ಲರೂ ದೇವಾಲಯಕ್ಕೆ ಇಟ್ಟಿಗೆ, ಹಣ, ಚಿನ್ನ ಮತ್ತು ಬೆಳ್ಳಿಯನ್ನು ದಾನ ಮಾಡಿದ್ದೀರಿ. ಆದರೆ ಅಲ್ಲಿ ನಡೆದಿದೆ ಎನ್ನಲಾದ ಪ್ರಮುಖ ಕಳ್ಳತನವು ಬಹಳ ಅವಮಾನಕರವಾಗಿದೆ. ಧರ್ಮದ ಹೆಸರಿನಲ್ಲಿ ಅಲ್ಲಿ ಏನು ನಡೆದಿದೆ ಎಂದು ಎಲ್ಲರಿಗೂ ತಿಳಿದಿದೆʼ ಎಂದು ಶಿವಕುಮಾರ್ ಹೇಳಿದರು.

ಅಯೋಧ್ಯೆಯಲ್ಲಿ ನಡೆದ ಘಟನೆಯು ಧರ್ಮದ ಹೆಸರಿನಲ್ಲಿ ದೇಣಿಗೆ ನೀಡಿದ ಜನರಿಗೆ ನೋವುಂಟು ಮಾಡಿದೆ ಎಂದು ಸಿಎಂ ಡಿಕೆಶಿ ತಿಳಿಸಿದ್ದಾರೆ. ʼನಮ್ಮ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ನಾವು ಬಯಸುತ್ತೇವೆ, ಆದ್ದರಿಂದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕೇಳಲಾಗಿದೆ. ಅದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆʼ ಎಂದು ಮುಖ್ಯಮಂತ್ರಿ ಹೇಳಿದರು.

ದೇವಾಲಯದಲ್ಲಿ ನಡೆಯುವ ಎಲ್ಲಾ ಘಟನೆಗಳ ಮೇಲೆ ನಿಗಾ
ಸಿಸಿಟಿವಿ ಕ್ಯಾಮೆರಾಗಳ ಫೀಡ್ ಅನ್ನು ಜಿಲ್ಲಾಧಿಕಾರಿಗಳ ಕಚೇರಿ, ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಪೊಲೀಸ್ ನಿಯಂತ್ರಣ ಕೊಠಡಿಗಳು ಮತ್ತು ಸಂಚಾರ ಕ್ಯಾಮೆರಾಗಳ ಮಾದರಿಯಲ್ಲಿ ಡ್ಯಾಶ್‌ಬೋರ್ಡ್‌ಗೆ ಸಂಪರ್ಕಿಸಲಾಗುವುದು ಮತ್ತು ದೇವಾಲಯದಲ್ಲಿ ನಡೆಯುವ ಎಲ್ಲಾ ಘಟನೆಗಳ ಮೇಲೆ ನಿಗಾ ಇಡಲಾಗುವುದು ಎಂದರು.

ಎಲ್ಲಾ ಪ್ರಮುಖ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿರಬೇಕು ಎಂದು ಹೇಳಿದ ಸಿಎಂ, “ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ಅದನ್ನು ಎಣಿಸಿದಾಗ ಮತ್ತು ಬೀಗ ತೆರೆದಾಗ ಮತ್ತು ಮುಚ್ಚಿದಾಗ- ಎಲ್ಲವನ್ನೂ ಕ್ಯಾಮೆರಾದಲ್ಲಿ ಸೆರೆಹಿಡಿಯಬೇಕು. ಕ್ಯಾಮೆರಾಗಳು 24/7 ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ” ಎಂದು ಹೇಳಿದರು. ರಾಮ ಮಂದಿರ ದೇಣಿಗೆ ವಿವಾದದಲ್ಲಿ ‘ಕರ್ನಾಟಕದ ನಂಟು’ ಇದೆಯೇ ಎಂಬ ಪ್ರಶ್ನೆಗೆ, ಶಿವಕುಮಾರ್, “ನೀವು ಈ ಪ್ರಶ್ನೆಯನ್ನು ಬಿಜೆಪಿ ನಾಯಕರಿಗೆ ಕೇಳಬೇಕು” ಎಂದು ಹೇಳಿದರು.

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

8 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

46 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

1 hour ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್‌: ಶೂ ರಾಜಧಾನಿ ಎಂದೇ…

2 hours ago