ಉಡುಪಿಯ ನಿಕಟಪೂರ್ವ ಶಾಸಕ ಕೆ . ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲಿದ್ದಾರೆ.
ಶ್ರೀಗಳ ಮಾರ್ಗದರ್ಶನದಂತೆ ಶ್ರೀಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗುತ್ತಿರುವಂತೆ ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ.
ರಾಜಸ್ಥಾನದಲ್ಲಿ ಬೀಟಿಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಲಾಗಿದ್ದು, ಇದೀಗ ಅಯೋಧ್ಯೆಯತ್ತ ಹೊರಟಿದೆ.
ಫೆ. 6 ರ ಸಂಜೆ ತೊಟ್ಟಿಲು ಅಯೋಧ್ಯೆ ತಲುಪಿ, 7 ರಂದು ಸಂಜೆಯ ಉತ್ಸವದಲ್ಲಿ ಶ್ರೀಗಳ ಮೂಲಕ ಇದರ ಅರ್ಪಣೆಯಾಗಲಿದ್ದು, ನೂತನ ತೊಟ್ಟಿಲಲ್ಲಿ ಶ್ರೀಬಾಲರಾಮನಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ಭಟ್ ತಿಳಿಸಿದ್ದಾರೆ.
ಅಯೋಧ್ಯೆ ಶ್ರೀರಾಮ ದೇವರ ಮಂಡಲೋತ್ಸವದಲ್ಲಿ ತೊಟ್ಟಿಲು ಸೇವೆಗೆ ರಾಜಸ್ಥಾನದಲ್ಲಿ ಬೀಟೆ ಮರದಿಂದ ನಿರ್ಮಿಸಲಾದ ಸುಂದರ ದಾರುಶಿಲ್ಪದ ತೊಟ್ಟಿಲು ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಸೇವಾರ್ಥ ಫೆ. 7ರಂದು ಸಮರ್ಪಣೆಯಾಗಲಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…