ಮುಂಬೈ: ತಮ್ಮ ಮನೆ ಮತ್ತು ಕಚೇರಿ ನೆಲಸಮ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಬಾಲಿವುಡ್ ನಟಿ ಕಂಗನಾ ರಣಾವತ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.
ಶಿವಸೇನೆಯ ಬೆದರಿಕೆ ನಡುವೆಯೂ ಇಂದು ಮಧ್ಯಾಹ್ನ ಮುಂಬೈಗೆ ಬಂದಿಳಿದ ಕಂಗನಾ, ಟ್ವಿಟ್ಟರ್ ನಲ್ಲಿ ನೆಲಸಮವಾಗಿರುವ ಕಟ್ಟಡದ ವಿಡಿಯೋ ಹಾಕಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದೆ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.
ಜೊತೆ ವಿಡಿಯೋ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತು ಫಿಲಂ ಮಾಫಿಯಾ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.
ಉದ್ಧವ್ ಠಾಕ್ರೆ ಫಿಲಂ ಮಾಫಿಯಾ ಜೊತೆ ಶಾಮೀಲಾಗಿ ಮನೆ ನಾಶ ಮಾಡಿ ನನ್ನ ವಿರುದ್ಧ ಸೇಡು ತೀರಿಸಿಕೊಂಡೆ ಎಂದು ತಿಳಿದುಕೊಂಡಿದ್ದೀಯಾ?.
ಇಂದು ನನ್ನ ಮನೆ ನೆಲಸಮ ಆಗಿರಬಹುದು, ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ. ಇದು ಸಮಯದಾಟ, ಪ್ರತಿ ಬಾರಿ ಒಂದೇ ಆಗಿರಲ್ಲ.
ಕಾಶ್ಮೀರಿ ಪಂಡಿತರ ಮೇಲೆ ಏನಾಗುತ್ತಿತ್ತು ಎಂಬುವುದು ಇಂದು ನನಗೆ ಅರ್ಥವಾಗಿದೆ. ನಾನು ಕೇವಲ ಅಯೋಧ್ಯೆ ಮಾತ್ರವಲ್ಲ, ಕಾಶ್ಮೀರದ ಕುರಿತು ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು ಮಾತು ನೀಡುತ್ತೇನೆ.ಸಿನಿಮಾಗಳ ಮೂಲಕ ದೇಶದ ಜನರನ್ನ ಎಚ್ಚರಿಸುವ ಕೆಲಸ ಮಾಡುತ್ತೇನೆ.ಈ ರೀತಿ ಕೆಲಸಗಳ ನಡೆಯುತ್ತಿರುವ ಬಗ್ಗೆ ಕೇಳಿದ್ದೆ. ಆದ್ರೆ ಇಂದು ನನ್ನೊಂದಿಗೆ ನಡೆದಿದೆ.
ಉದ್ಧವ್ ಠಾಕ್ರೆಯ ಕ್ರೂರತ್ವದ ಭಯೋತ್ಪಾದನೆ ನನ್ನೊಂದಿಗೆ ನಡೆದಿರೋದು ಒಳ್ಳೆಯದು ಆಯ್ತು. ಕಾರಣ ಇದಕ್ಕೆ ಕೆಲ ಮಹತ್ವದ ಕಾರಣವಿದೆ.
ಜೈ ಹಿಂದ್, ಜೈ ಮಹಾರಾಷ್ಟ್ರ. ಎಂದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…