Featured

ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ : ವೀರಪ್ಪ ಮೊಯ್ಲಿ – Vishwanews24

ಪ್ರಚೋದನೆ ಎರಡೂ ಕಡೆಯಿಂದ ಬಂದಾಗ ಸಮಸ್ಯೆ ಆಗುತ್ತದೆ..

ಯುಪಿಎ ಸರ್ಕಾರ ಇದ್ದಾಗ ಹೀಗೆ ಇರಲಿಲ್ಲ..

ಎಸ್.ಡಿ.ಪಿ.ಐ ತರದ ಸಂಘಟನೆ ಗಳನ್ನು ಬ್ಯಾನ್ ಮಾಡಬೇಕು. .

ಬೆಂಗಳೂರು: ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಶಿರಚ್ಛೇದ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಥಯಾತ್ರೆ ನಡೆಯುವವರೆಗೆ ಡೊಮೆಸ್ಟಿಕ್ ಟೆರರಿಸಂ ಇರಲಿಲ್ಲ. ದೇಶೀಯ ಉಗ್ರಗಾಮಿ ವ್ಯವಸ್ಥೆ ಆಮೇಲೆ ಹುಟ್ಟಿಕೊಂಡಿತು. ಡೊಮೆಸ್ಟಿಕ್ ಟೆರರಿಸಂ ಮೊದಲು ಹತ್ತಿಕ್ಕಬೇಕು ಎಂದರು.

ಈ ಕೆಲಸ ಮೊದಲು ಆಗಬೇಕು. ತರಬೇತಿ ಕೊಡುವುದನ್ನು ಹತ್ತಿಕ್ಕಬೇಕು. ನೆಮ್ಮದಿ ಕದಡಲು ಎಲ್ಲರೂ ಕಾರಣ. ಉಗ್ರರು ಏಕೆ ಹುಟ್ಟುತ್ತಾರೆ ಎಂಬುದು ಕಾರಣ. ಪ್ರಚೋದನೆ ಎರಡೂ ಕಡೆಯಿಂದ ಬಂದಾಗ ಸಮಸ್ಯೆ ಆಗುತ್ತದೆ. ಪ್ರಚೋದನೆ ಹತ್ತಿಕ್ಕುವ ಕೆಲಸ ಮಾಡಬೇಕು ಎಂದು ಮೊಯ್ಲಿ ಆಗ್ರಹಿಸಿದರು.

ಹ್ಯಾಪಿಸೆನ್ ಇಂಡೆಕ್ಸ್ ಪಟ್ಟಿಯಲ್ಲಿ ಭಾರತ ಕುಸಿತ ಆಗುತ್ತಿದೆ. ಎಸ್ ಡಿಪಿಐ ಜನರ ನೆಮ್ಮದಿ ಕದಡುತ್ತಿದೆ. ಹೀಗೆ ಹಿಂದೂ ಸಂಘಟನೆಗಳು ಕಾರಣವಾಗುತ್ತಿವೆ. ಯುಪಿಎ ಸರ್ಕಾರ ಇದ್ದಾಗ ಹೀಗೆ ಇರಲಿಲ್ಲ. ಸರ್ದಾರ್ ಪಟೇಲರು RSS ಬ್ಯಾನ್ ಮಾಡಬೇಕೆಂದು ಹೊರಟಾಗ ನೆಹರೂ ತಡೆದರು. ಇಂದು ಆ ಸಂಘಟನೆ ಆರಾಧ್ಯ ದೈವ ಪಟೇಲರಾಗಿದ್ದಾರೆ. ಎಸ್.ಡಿ.ಪಿ.ಐ ತರದ ಸಂಘಟನೆ ಗಳನ್ನು ಬ್ಯಾನ್ ಮಾಡಬೇಕು. ಅದೆ ರೀತಿ ಹಿಂದೂ ಪ್ರಚೋದನೆಯನ್ನೂ ತಡೆಯಬೇಕು ಎಂದು ಅವರು ತಿಳಿಸಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago