Featured

ಅಯೋಧ್ಯೆ ರಾಮ ಮಂದಿರದಲ್ಲಿ ಮೊದಲ ದೀಪಾವಳಿ ; ಅದ್ದೂರಿಯಾಗಿ ಆಚರಿಸಲು ಯೋಗಿ ಸರ್ಕಾರ ಸಿದ್ಧತೆ – vishwanews24

ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿ ; 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ಯೋಗಿ ಸರ್ಕಾರ ಸಿದ್ಧತೆ

ಲಕ್ನೋ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಸರ್ಕಾರ ಸಿದ್ಧತೆ ಆರಂಭಿಸಿದೆ.

ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಹಬ್ಬದ ದಿನದಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿ ಪರಿಣಾಮ ಬೀರುವುದನ್ನು ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ವಿಶೇಷ ಮೇಣದ ದೀಪಗಳನ್ನು ಬಳಸಲಾಗುತ್ತದೆ. ದೀರ್ಘಕಾಲದವರೆಗೆ ಈ ದೀಪಗಳು ಬೆಳಗಲಿವೆ. ಈ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯೂ ಪ್ರಮುಖವಾಗಿರಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ವಿಶೇಷ ಹೂವಿನ ಅಲಂಕಾರದಿಂದ ಕಂಗೊಳಿಸಲಿರುವ ರಾಮ ಮಂದಿರ ಸಂಕೀರ್ಣವನ್ನು ಅಲಂಕಾರಕ್ಕಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗಕ್ಕೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡಲಾಗಿದೆ. ಬೆಳಕು, ಪ್ರವೇಶ ಕಮಾನು ಅಲಂಕಾರಗಳು ಮತ್ತು ಸಂಪೂರ್ಣ ಶುಚಿಗೊಳಿಸುವಿಕೆಯ ಒಟ್ಟಾರೆ ಮೇಲ್ವಿಚಾರಣೆಯನ್ನು ಬಿಹಾರ ಕೇಡರ್‌ನ ನಿವೃತ್ತ ಐಜಿ ಅಶು ಶುಕ್ಲಾ ಅವರಿಗೆ ವಹಿಸಲಾಗಿದೆ.

ಈ ದೀಪಾವಳಿಯಲ್ಲಿ ಅಯೋಧ್ಯೆಯನ್ನು ಕೇವಲ ಧರ್ಮ ಮತ್ತು ನಂಬಿಕೆಯ ಕೇಂದ್ರವನ್ನಾಗಿ ಮಾಡದೆ, ಸ್ವಚ್ಛತೆ ಮತ್ತು ಪರಿಸರ ಪ್ರಜ್ಞೆಯ ಸಂಕೇತವನ್ನಾಗಿ ಮಾಡುವ ಗುರಿಯನ್ನು ದೇವಾಲಯದ ಟ್ರಸ್ಟ್ ಹೊಂದಿದೆ. 2,000 ಕ್ಕೂ ಹೆಚ್ಚು ಮೇಲ್ವಿಚಾರಕರು, ಉಸ್ತುವಾರಿಗಳು ಮತ್ತು ಇತರ ಸದಸ್ಯರ ಮಾರ್ಗದರ್ಶನದಲ್ಲಿ 30,000 ಕ್ಕೂ ಹೆಚ್ಚು ಸ್ವಯಂಸೇವಕರು 28 ಲಕ್ಷ ದೀಪಗಳನ್ನು ಸರಯೂ ನದಿಯ ಉದ್ದಕ್ಕೂ 55 ಸಾಲುಗಳಲ್ಲಿ ಅಲಂಕರಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ದೀಪೋತ್ಸವ ಕಾರ್ಯಕ್ರಮದ ಸಲುವಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಕ್ಟೋಬರ್ 29 ರಿಂದ ನವೆಂಬರ್ 1 ರ ಮಧ್ಯರಾತ್ರಿಯವರೆಗೆ ದೇವಸ್ಥಾನವನ್ನು ‘ಭವನ ದರ್ಶನ’ಕ್ಕಾಗಿ ತೆರೆದಿಡಲು ನಿರ್ಧರಿಸಲಾಗಿದೆ.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago