Featured

ಅಯೋಧ್ಯೆ ರಾಮ ಮಂದಿರದಲ್ಲಿ ಮೊದಲ ದೀಪಾವಳಿ ; ಅದ್ದೂರಿಯಾಗಿ ಆಚರಿಸಲು ಯೋಗಿ ಸರ್ಕಾರ ಸಿದ್ಧತೆ – vishwanews24

ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿ ; 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ಯೋಗಿ ಸರ್ಕಾರ ಸಿದ್ಧತೆ

ಲಕ್ನೋ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಸರ್ಕಾರ ಸಿದ್ಧತೆ ಆರಂಭಿಸಿದೆ.

ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಹಬ್ಬದ ದಿನದಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿ ಪರಿಣಾಮ ಬೀರುವುದನ್ನು ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ವಿಶೇಷ ಮೇಣದ ದೀಪಗಳನ್ನು ಬಳಸಲಾಗುತ್ತದೆ. ದೀರ್ಘಕಾಲದವರೆಗೆ ಈ ದೀಪಗಳು ಬೆಳಗಲಿವೆ. ಈ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯೂ ಪ್ರಮುಖವಾಗಿರಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ವಿಶೇಷ ಹೂವಿನ ಅಲಂಕಾರದಿಂದ ಕಂಗೊಳಿಸಲಿರುವ ರಾಮ ಮಂದಿರ ಸಂಕೀರ್ಣವನ್ನು ಅಲಂಕಾರಕ್ಕಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗಕ್ಕೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡಲಾಗಿದೆ. ಬೆಳಕು, ಪ್ರವೇಶ ಕಮಾನು ಅಲಂಕಾರಗಳು ಮತ್ತು ಸಂಪೂರ್ಣ ಶುಚಿಗೊಳಿಸುವಿಕೆಯ ಒಟ್ಟಾರೆ ಮೇಲ್ವಿಚಾರಣೆಯನ್ನು ಬಿಹಾರ ಕೇಡರ್‌ನ ನಿವೃತ್ತ ಐಜಿ ಅಶು ಶುಕ್ಲಾ ಅವರಿಗೆ ವಹಿಸಲಾಗಿದೆ.

ಈ ದೀಪಾವಳಿಯಲ್ಲಿ ಅಯೋಧ್ಯೆಯನ್ನು ಕೇವಲ ಧರ್ಮ ಮತ್ತು ನಂಬಿಕೆಯ ಕೇಂದ್ರವನ್ನಾಗಿ ಮಾಡದೆ, ಸ್ವಚ್ಛತೆ ಮತ್ತು ಪರಿಸರ ಪ್ರಜ್ಞೆಯ ಸಂಕೇತವನ್ನಾಗಿ ಮಾಡುವ ಗುರಿಯನ್ನು ದೇವಾಲಯದ ಟ್ರಸ್ಟ್ ಹೊಂದಿದೆ. 2,000 ಕ್ಕೂ ಹೆಚ್ಚು ಮೇಲ್ವಿಚಾರಕರು, ಉಸ್ತುವಾರಿಗಳು ಮತ್ತು ಇತರ ಸದಸ್ಯರ ಮಾರ್ಗದರ್ಶನದಲ್ಲಿ 30,000 ಕ್ಕೂ ಹೆಚ್ಚು ಸ್ವಯಂಸೇವಕರು 28 ಲಕ್ಷ ದೀಪಗಳನ್ನು ಸರಯೂ ನದಿಯ ಉದ್ದಕ್ಕೂ 55 ಸಾಲುಗಳಲ್ಲಿ ಅಲಂಕರಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ದೀಪೋತ್ಸವ ಕಾರ್ಯಕ್ರಮದ ಸಲುವಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಕ್ಟೋಬರ್ 29 ರಿಂದ ನವೆಂಬರ್ 1 ರ ಮಧ್ಯರಾತ್ರಿಯವರೆಗೆ ದೇವಸ್ಥಾನವನ್ನು ‘ಭವನ ದರ್ಶನ’ಕ್ಕಾಗಿ ತೆರೆದಿಡಲು ನಿರ್ಧರಿಸಲಾಗಿದೆ.

 

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago