ಅಯೋಧ್ಯೆ: ಭರತ ಖಂಡದಲ್ಲಿ ಮೋಕ್ಷದಾಯಕವಾದವು ಎನ್ನಲಾದ ಸಪ್ತ ಕ್ಷೇತ್ರಗಳಲ್ಲಿ ಮೊದಲನೆಯದು ಎಂದು ಪರಿಗಣಿತ ವಾಗಿರುವ ಅಯೋಧ್ಯೆಯಲ್ಲಿ ಭಾರತೀಯರ ನೂರಾರು ವರ್ಷಗಳ ಕನಸು ಇಂದು ನನಸಾಗಿದೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಪ್ರಧಾನ ಗರ್ಭಗುಡಿಯ ಶಿಲಾನ್ಯಾಸ ನಡೆದಿದೆ.
ಇದರಲ್ಲಿ ನಾವು ಭಾಗಿಯಾಗಿದ್ದು, ಈ ಅವಕಾಶ ನಮ್ಮ ಬದುಕಿನಲ್ಲಿ ಶ್ರೀರಾಮ, ಶ್ರೀಕೃಷ್ಣ ದೇವರ ಕೃಪೆಯಿಂದಾಗಿ ಲಭಿಸಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಟ್ರಸ್ಟಿಗಳಲ್ಲಿ ಒಬ್ಬರಾಗಿರುವ ಶ್ರೀ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದ್ದಾರೆ.
ಅಯೋಧೆಯಲ್ಲಿ ಬುಧವಾರ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.
ಮಂದಿರ ನಿರ್ಮಾಣಕಾರ್ಯ ಸುಸೂತ್ರವಾಗಿ ನೆರವೇರಲಿ, ನಿಶ್ಚಿತ ದಿನ ಅದು ಪರಿಪೂರ್ಣವಾಗಲಿ ಎಂದು ಈ ಸಂದರ್ಭದಲ್ಲಿ ನಾವು ಶ್ರೀ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದೇವೆ ಎಂದರು.
ಮಂದಿರ ನಿರ್ಮಾಣ ಕಾರ್ಯ ಯೋಜಿಸಿದ ರೀತಿಯಲ್ಲಿ ನಡೆದು 2024ರ ಜನವರಿ ಅಂದರೆ ಮಕರ ಸಂಕ್ರಾಂತಿಯ ಬೆನ್ನಿಗೆ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಅದರಲ್ಲಿ ಭಾಗಿಯಾಗುವ, ಅದನ್ನು ವೀಕ್ಷಿಸುವ ಮಹಾಭಾಗ್ಯ ಭರತ ಖಂಡದ ಎಲ್ಲರಿಗೆ ಒದಗಿ ಬರಲಿ ಎಂಬುದಾಗಿಯೂ ನಾವು ಶ್ರೀಕೃಷ್ಣ ಮತ್ತು ಶ್ರೀರಾಮ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದೇವೆ ಎಂದೂ ಶ್ರೀಪಾದರು ನುಡಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…