ಹೊಸದಿಲ್ಲಿ : ಆಯೋಧ್ಯೆಯಲ್ಲಿನ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಸೂಕ್ತ ಪೀಠವು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಒಳಗೊಂಡ ಪೀಠ ಈ ವಿಷಯವನ್ನು ಇಂದು ಪ್ರಕಟಿಸಿತು.
ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಕೇಸು ಇಂದು ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದ ಒಡನೆಯೇ ವರಿಷ್ಠ ನ್ಯಾಯಮೂರ್ತಿಗಳಿದ್ದ ಪೀಠ ಈ ನಿರ್ಧಾರ ಕೈಗೊಂಡಿತು.
ರಾಮ ಜನ್ಮಭೂಮಿ – ಬಾಬರಿ ಮಸೀದಿಯ ವಿವಾದಿತ 2.77 ಎಕರೆ ನಿವೇಶನವನ್ನು ಮೂವರು ಕಕ್ಷಿದಾರರಾಗಿರುವ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾಡಾ ಮತ್ತು ರಾಮ ಲಲ್ಲಾ ಅವರೊಳಗೆ ಸಮಾನವಾಗಿ ಹಂಚಬೇಕೆಂದು ನಾಲ್ಕು ಸಿವಿಲ್ ದಾವೆಗಳಲ್ಲಿ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 14 ಅಪೀಲುಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಾಧೀಶರರನ್ನು ಒಳಗೊಂಡ ಪೀಠವನ್ನು ರಚಿಸುವ ಸಾಧ್ಯತೆ ಇದೆ.
ಅರ್ಜಿಗಳನ್ನು ಸೂಕ್ತ ಪೀಠಕ್ಕೆ ನಿಗದಿ ಮಾಡುವ ದಿನಾಂಕವನ್ನು ನಿರ್ಧಾರ ಮಾಡುವುದಾಗಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಡಿ. 24ರಂದು ತಿಳಿಸಿದ್ದರು. ಅದೇ ದಿನ ಮಾತನಾಡಿದ್ದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ವಿವಾದವನ್ನು ದಿನಂಪ್ರತಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಶೀಘ್ರ ತೀರ್ಪು ಪ್ರಕಟಿಸಿಬೇಕೆಂದು ಕೇಂದ್ರ ಸರ್ಕಾರ ಬಯಸುತ್ತದೆ ಎಂದು ಹೇಳಿದ್ದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…