Featured

ಅಯೋಧ್ಯೆ ವಿಚಾರಣೆ ಜ.10ರಂದು ಪ್ರಕಟ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿಆಯೋಧ್ಯೆಯಲ್ಲಿನ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಸೂಕ್ತ ಪೀಠವು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸಲಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಹೇಳಿದೆ.

ಸುಪ್ರೀಂ ಕೋರ್ಟ್‌ ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್‌ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌ ಎಸ್‌ ಕೆ ಕೌಲ್‌ ಅವರನ್ನು ಒಳಗೊಂಡ ಪೀಠ ಈ ವಿಷಯವನ್ನು ಇಂದು ಪ್ರಕಟಿಸಿತು.

ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಕೇಸು ಇಂದು ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದ ಒಡನೆಯೇ ವರಿಷ್ಠ ನ್ಯಾಯಮೂರ್ತಿಗಳಿದ್ದ ಪೀಠ ಈ ನಿರ್ಧಾರ ಕೈಗೊಂಡಿತು.

ರಾಮ ಜನ್ಮಭೂಮಿ – ಬಾಬರಿ ಮಸೀದಿಯ ವಿವಾದಿತ 2.77 ಎಕರೆ ನಿವೇಶನವನ್ನು ಮೂವರು ಕಕ್ಷಿದಾರರಾಗಿರುವ ಸುನ್ನಿ ವಕ್‌ಫ್ ಬೋರ್ಡ್‌, ನಿರ್ಮೋಹಿ ಅಖಾಡಾ ಮತ್ತು ರಾಮ ಲಲ್ಲಾ ಅವರೊಳಗೆ ಸಮಾನವಾಗಿ ಹಂಚಬೇಕೆಂದು ನಾಲ್ಕು ಸಿವಿಲ್‌ ದಾವೆಗಳಲ್ಲಿ ಅಲಹಾಬಾದ್‌ ಹೈಕೋರ್ಟ್‌ 2010ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 14 ಅಪೀಲುಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಮೂವರು ನ್ಯಾಯಾಧೀಶರರನ್ನು ಒಳಗೊಂಡ ಪೀಠವನ್ನು ರಚಿಸುವ ಸಾಧ್ಯತೆ ಇದೆ.

ಅರ್ಜಿಗಳನ್ನು ಸೂಕ್ತ ಪೀಠಕ್ಕೆ ನಿಗದಿ ಮಾಡುವ ದಿನಾಂಕವನ್ನು ನಿರ್ಧಾರ ಮಾಡುವುದಾಗಿ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳು ಡಿ. 24ರಂದು ತಿಳಿಸಿದ್ದರು. ಅದೇ ದಿನ ಮಾತನಾಡಿದ್ದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​, ವಿವಾದವನ್ನು ದಿನಂಪ್ರತಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್​ ಶೀಘ್ರ ತೀರ್ಪು ಪ್ರಕಟಿಸಿಬೇಕೆಂದು ಕೇಂದ್ರ ಸರ್ಕಾರ ಬಯಸುತ್ತದೆ ಎಂದು ಹೇಳಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

24 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago