ಹೊಸದಿಲ್ಲಿ : ಆಯೋಧ್ಯೆಯಲ್ಲಿನ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಸೂಕ್ತ ಪೀಠವು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಒಳಗೊಂಡ ಪೀಠ ಈ ವಿಷಯವನ್ನು ಇಂದು ಪ್ರಕಟಿಸಿತು.
ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಕೇಸು ಇಂದು ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದ ಒಡನೆಯೇ ವರಿಷ್ಠ ನ್ಯಾಯಮೂರ್ತಿಗಳಿದ್ದ ಪೀಠ ಈ ನಿರ್ಧಾರ ಕೈಗೊಂಡಿತು.
ರಾಮ ಜನ್ಮಭೂಮಿ – ಬಾಬರಿ ಮಸೀದಿಯ ವಿವಾದಿತ 2.77 ಎಕರೆ ನಿವೇಶನವನ್ನು ಮೂವರು ಕಕ್ಷಿದಾರರಾಗಿರುವ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾಡಾ ಮತ್ತು ರಾಮ ಲಲ್ಲಾ ಅವರೊಳಗೆ ಸಮಾನವಾಗಿ ಹಂಚಬೇಕೆಂದು ನಾಲ್ಕು ಸಿವಿಲ್ ದಾವೆಗಳಲ್ಲಿ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 14 ಅಪೀಲುಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಾಧೀಶರರನ್ನು ಒಳಗೊಂಡ ಪೀಠವನ್ನು ರಚಿಸುವ ಸಾಧ್ಯತೆ ಇದೆ.
ಅರ್ಜಿಗಳನ್ನು ಸೂಕ್ತ ಪೀಠಕ್ಕೆ ನಿಗದಿ ಮಾಡುವ ದಿನಾಂಕವನ್ನು ನಿರ್ಧಾರ ಮಾಡುವುದಾಗಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಡಿ. 24ರಂದು ತಿಳಿಸಿದ್ದರು. ಅದೇ ದಿನ ಮಾತನಾಡಿದ್ದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ವಿವಾದವನ್ನು ದಿನಂಪ್ರತಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಶೀಘ್ರ ತೀರ್ಪು ಪ್ರಕಟಿಸಿಬೇಕೆಂದು ಕೇಂದ್ರ ಸರ್ಕಾರ ಬಯಸುತ್ತದೆ ಎಂದು ಹೇಳಿದ್ದರು.
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…