ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು.ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ವಿಚಾರದಲ್ಲಿ ಜನಸಾಮಾನ್ಯರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ,ಉತ್ತರ ಪ್ರದೇಶದಲ್ಲಿ 2014ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.
ಅಯೋಧ್ಯೆ ವಿವಾದವನ್ನು ನೀವು ಮಾತುಕತೆ ಮೂಲಕ ಬಗೆಹರಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗಿ, ಕೋರ್ಟ್ ಮೊದಲು ವಿವಾದವನ್ನು ನಮಗೆ ಒಪ್ಪಿಸಲಿ ಎಂದರು.ನಾನು ಈಗಲೂ ಸಹ ಆದಷ್ಟು ಬೇಗ ತೀರ್ಪು ನೀಡುವಂತೆ ಕೋರ್ಟ್ಗೆ ಮನವಿ ಮಾಡುತ್ತಿದ್ದೇನೆ. ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ನಮಗೆ ಆದಷ್ಟು ಬೇಗ ನ್ಯಾಯ ಲಭಿಸಬೇಕು ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…