Featured

ಅಯೋಧ್ಯೆ ವಿವಾದ : ಸುಪ್ರೀಂಕೋರ್ಟ್ ಗೆ ತೀರ್ಪು ನೀಡಲು ಸಾಧ್ಯವಾಗದಿದ್ದರೆ ಈ ಪ್ರಕರಣವನ್ನು ನಮಗೆ ವರ್ಗಾಯಿಸಿ 24 ಗಂಟೆಗಳ ಒಳಗೆ ಬಗೆಹರಿಸುತ್ತೇವೆ : ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ – Vishwanews24

ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು.ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ವಿಚಾರದಲ್ಲಿ ಜನಸಾಮಾನ್ಯರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ,ಉತ್ತರ ಪ್ರದೇಶದಲ್ಲಿ 2014ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.

ಅಯೋಧ್ಯೆ ವಿವಾದವನ್ನು ನೀವು ಮಾತುಕತೆ ಮೂಲಕ ಬಗೆಹರಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗಿ, ಕೋರ್ಟ್ ಮೊದಲು ವಿವಾದವನ್ನು ನಮಗೆ ಒಪ್ಪಿಸಲಿ ಎಂದರು.ನಾನು ಈಗಲೂ ಸಹ ಆದಷ್ಟು ಬೇಗ ತೀರ್ಪು ನೀಡುವಂತೆ ಕೋರ್ಟ್‍ಗೆ ಮನವಿ ಮಾಡುತ್ತಿದ್ದೇನೆ. ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ನಮಗೆ ಆದಷ್ಟು ಬೇಗ ನ್ಯಾಯ ಲಭಿಸಬೇಕು ಎಂದು ತಿಳಿಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago