ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು.ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ವಿಚಾರದಲ್ಲಿ ಜನಸಾಮಾನ್ಯರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ,ಉತ್ತರ ಪ್ರದೇಶದಲ್ಲಿ 2014ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.
ಅಯೋಧ್ಯೆ ವಿವಾದವನ್ನು ನೀವು ಮಾತುಕತೆ ಮೂಲಕ ಬಗೆಹರಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗಿ, ಕೋರ್ಟ್ ಮೊದಲು ವಿವಾದವನ್ನು ನಮಗೆ ಒಪ್ಪಿಸಲಿ ಎಂದರು.ನಾನು ಈಗಲೂ ಸಹ ಆದಷ್ಟು ಬೇಗ ತೀರ್ಪು ನೀಡುವಂತೆ ಕೋರ್ಟ್ಗೆ ಮನವಿ ಮಾಡುತ್ತಿದ್ದೇನೆ. ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ನಮಗೆ ಆದಷ್ಟು ಬೇಗ ನ್ಯಾಯ ಲಭಿಸಬೇಕು ಎಂದು ತಿಳಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…