ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು.ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ವಿಚಾರದಲ್ಲಿ ಜನಸಾಮಾನ್ಯರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ,ಉತ್ತರ ಪ್ರದೇಶದಲ್ಲಿ 2014ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.
ಅಯೋಧ್ಯೆ ವಿವಾದವನ್ನು ನೀವು ಮಾತುಕತೆ ಮೂಲಕ ಬಗೆಹರಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗಿ, ಕೋರ್ಟ್ ಮೊದಲು ವಿವಾದವನ್ನು ನಮಗೆ ಒಪ್ಪಿಸಲಿ ಎಂದರು.ನಾನು ಈಗಲೂ ಸಹ ಆದಷ್ಟು ಬೇಗ ತೀರ್ಪು ನೀಡುವಂತೆ ಕೋರ್ಟ್ಗೆ ಮನವಿ ಮಾಡುತ್ತಿದ್ದೇನೆ. ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ನಮಗೆ ಆದಷ್ಟು ಬೇಗ ನ್ಯಾಯ ಲಭಿಸಬೇಕು ಎಂದು ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…