ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸಮಸ್ತ ಹಿಂದೂಗಳ ಬಹು ಶತಮಾನದ ಕನಸು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ದಿನವನ್ನು ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಉಡುಪಿಯ ಜನತೆ ತಮ್ಮ ಮನೆ, ಕಚೇರಿ, ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ರಾಮ ಜ್ಯೋತಿಯನ್ನು ಬೆಳಗುವ ಮೂಲಕ ಪೊಡವಿಗೊಡೆಯ ಕೃಷ್ಣನ ನಾಡಿನಿಂದ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ವಿಶ್ವಸ್ಥರಾಗಿರುವ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥರ ಆಶಯದಂತೆ ದೇಶಕ್ಕೆ ಹೊಸ ಸಂದೇಶ ಸಾರುವಂತೆ ಉಡುಪಿಯ ಜನತೆಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಜನವರಿ 14 ಮಕರ ಸಂಕ್ರಾತಿಯ ಶುಭ ದಿನದಿಂದ ಆರಂಭಗೊಂಡು, ಜನವರಿ 18 ರಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವ ಹಾಗೂ ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಮಾರಂಭದ ಪ್ರಯುಕ್ತ ಜನವರಿ 25 ರವೆರೆಗೆ 10 ದಿನಗಳ ಕಾಲ ದೀಪಾಲಂಕಾರ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.
ಜನವರಿ 22 ರಂದು ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಹಾಲು ಪಾಯಸ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ
ಜನವರಿ 22 ರಂದು ರಾಮ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಭಕ್ತಾದಿಗಳಿಗೆ ವಿಶೇಷ ಹಾಲು ಪಾಯಸ ಸೇವೆ ಹಾಗೂ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿವಿಧ ತಂಡಗಳ ಕುಣಿತ ಭಜನಾ ಕಾರ್ಯಕ್ರಮ ಆಯೋಜಿಸಿರುವುದಾಗಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…