ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸಮಸ್ತ ಹಿಂದೂಗಳ ಬಹು ಶತಮಾನದ ಕನಸು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ದಿನವನ್ನು ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಉಡುಪಿಯ ಜನತೆ ತಮ್ಮ ಮನೆ, ಕಚೇರಿ, ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ರಾಮ ಜ್ಯೋತಿಯನ್ನು ಬೆಳಗುವ ಮೂಲಕ ಪೊಡವಿಗೊಡೆಯ ಕೃಷ್ಣನ ನಾಡಿನಿಂದ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ವಿಶ್ವಸ್ಥರಾಗಿರುವ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥರ ಆಶಯದಂತೆ ದೇಶಕ್ಕೆ ಹೊಸ ಸಂದೇಶ ಸಾರುವಂತೆ ಉಡುಪಿಯ ಜನತೆಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಜನವರಿ 14 ಮಕರ ಸಂಕ್ರಾತಿಯ ಶುಭ ದಿನದಿಂದ ಆರಂಭಗೊಂಡು, ಜನವರಿ 18 ರಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವ ಹಾಗೂ ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಮಾರಂಭದ ಪ್ರಯುಕ್ತ ಜನವರಿ 25 ರವೆರೆಗೆ 10 ದಿನಗಳ ಕಾಲ ದೀಪಾಲಂಕಾರ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.
ಜನವರಿ 22 ರಂದು ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಹಾಲು ಪಾಯಸ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ
ಜನವರಿ 22 ರಂದು ರಾಮ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಭಕ್ತಾದಿಗಳಿಗೆ ವಿಶೇಷ ಹಾಲು ಪಾಯಸ ಸೇವೆ ಹಾಗೂ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿವಿಧ ತಂಡಗಳ ಕುಣಿತ ಭಜನಾ ಕಾರ್ಯಕ್ರಮ ಆಯೋಜಿಸಿರುವುದಾಗಿ ತಿಳಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…