ಭೋಪಾಲ್: ಅಯೋಧ್ಯೆ ಹಾಗೂ ಕಾಶಿ ನಂತರ ಮಥುರಾದಲ್ಲೂ ಕೃಷ್ಣನ ಭವ್ಯ ಮಂದಿರ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮ ಭೂಮಿ ಹಾಗೂ ಕಾಶಿಯಷ್ಟೇ ಮಥುರವೂ ತನ್ನದೇ ಆದ ಮಹತ್ವವನ್ನು ಪಡೆದಿದೆ. ಅವುಗಳ ಮರುಸ್ಥಾಪನೆಯ ನಂತರ ಮಥುರಾದಲ್ಲೂ ಭವ್ಯ ಮಂದಿರ ನಿರ್ಮಿಸಲಾಗುತ್ತದೆ ಎಂದರು.
ಪ್ರೀತಿ, ವಾತ್ಸಲ್ಯದ ಪ್ರತೀಕ ಶ್ರೀಕೃಷ್ಣ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಅಲ್ಲಿ ಕೃಷ್ಣನ ಭವ್ಯವಾದ ಮಂದಿರವಿರಬೇಕು. ಈಗ ಅಲ್ಲಿ ದೇವಸ್ಥಾನವಿದ್ದು, ಪ್ರಧಾನಿ ಮೋದಿ ಅವರು ಕಾಶಿಯಲ್ಲಿ ಅಭಿವೃದ್ಧಿ ಪಡಿಸಿದ ಕಾರಿಡಾರ್ನಂತೆ ಸುಂದರಗೊಳಿಸಬಹುದು. ಜೊತೆಗೆ ದೇವಸ್ಥಾನದಿಂದ ಗಂಗಾ ನದಿಯನ್ನು ನೇರವಾಗಿ ನೋಡಬಹುದು ಎಂದು ಹೇಳಿದರು.
ಕಾಶಿ ವಿಶ್ವನಾಥನ ಪುನಾರಾಭಿವೃದ್ಧಿ ಬಹಳ ಕಷ್ಟಕರವಾಗಿತ್ತು. ಆದರೂ ಇಂದು ಕಾಶಿಯಲ್ಲಿ ದೇವಸ್ಥಾನದ ಅಭಿವೃದ್ಧಿಯಾಗುತ್ತಿದೆ. ಇದರಿಂದ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ನಾವು ನೋಡಬಹುದಾಗಿದೆ. ಈ ರೀತಿಯೇ ಮಥುರಾದಲ್ಲಿ ಆಗುತ್ತದೆ ಎಂದು ಭರವಸೆ ನೀಡಿದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಬಿಜೆಪಿ ಸಂಸದೆ, ಕಾಶಿಗೆ ತೆರಳುತ್ತಿರುವುದಾಗಿ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…