desha

ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಮಹಿಳಾ ಪತ್ರಕರ್ತೆಯರು ವಾಪಸ್..

ತಿರುವನಂತಪುರಂ: ಸುಪ್ರೀಂ ಕೋರ್ಟ್ ಆದೇಶ, ಕೇರಳ ಪೊಲೀಸರ ಭಾರಿ ಭದ್ರತೆಯ ನಡುವೆಯೂ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶ ಅಸಾಧ್ಯವಾಗಿದ್ದು, ಶಬರಿಮಲೆಯಿಂದ ಮಹಿಳಾ ಪತ್ರಕರ್ತೆಯರು ವಾಪಸ್ ಆಗಿದ್ದಾರೆ.

ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳಾ ಪತ್ರಕರ್ತೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ಆಂಧ್ರ ಪ್ರದೇಶ ಮೂಲದ ಪತ್ರಕರ್ತೆ ಕವಿತಾ ಜಕ್ಕಲ್ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಶಬರಿಮಲೆಯತ್ತ ಪ್ರಯಾಣ ಆರಂಭಿಸಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆಗೆ ಅವರು ಮಣಿದಿದ್ದು, ಶಬರಿಮಲೆಯಿಂದ ವಾಪಸ್ ತೆರಳಲು ನಿರ್ಧರಿಸಿದ್ದಾರೆ.
ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ ಹೆಲ್ಮೆಟ್ ಹಾಗೂ ಸಮವಸ್ತ್ರ ಧರಿಸಿ ಭಾರೀ ಭದ್ರತೆಯ ಮೂಲಕ ದೇವಾಲಯದತ್ತ ತೆರಳಿದ್ದರು. ಮಹಿಳೆಯರು ಪಂಪಾ ದಾಟುತ್ತಿದ್ದಂತೆಯೇ ಪ್ರತಿಭಟನೆ ತೀವ್ರಗೊಂಡಿದ್ದು, ಸ್ವತಃ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರು ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಶಬರಿಲಮಯೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿ ಭಕ್ತರು ಕುಳಿತು ನಾವು ಸತ್ತರೂ ಸರಿಯೇ ಮೆಟ್ಟಿಲ ಮೂಲಕ ಮಹಿಳೆಯರು ತೆರಳಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಿಳಿದ ಪೊಲೀಸ್ ವರಿಷ್ಠಾಧಿಕಾರಿಗಳು ಪಥನಂತಿಟ್ಟ ಕಚೇರಿಯಲ್ಲಿ ಸಂಧಾನ ಸಭೆ ಆಯೋಜಿಸಿದರು. ಈ ವೇಳೆ ಕಚೇರಿಗೆ ಮಹಿಳಾ ಪತ್ರಕರ್ತೆಯರನ್ನೂ ಕರೆಸಿಕೊಂಡ ಅಧಿಕಾರಿಗಳು ಈ ಗಂಭೀರ ಪರಿಸ್ಥಿತಿಯಲ್ಲಿ ದೇವರ ದರ್ಶನ ಬೇಡ ಎಂದು ಪತ್ರಕರ್ತೆಯರ ಮನವೊಲಿಸಿದ್ದಾರೆ.
ಅಂತಿಮವಾಗಿ ಮಹಿಳಾ ಪತ್ರಕರ್ತೆಯರು ಶಬರಿಮಲೆಯಿಂದ ವಾಪಸ್ ತೆರಳು ನಿರ್ಧರಿಸಿದ್ದಾರೆ.
Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

26 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

37 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

44 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

60 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago