desha

ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಮಹಿಳಾ ಪತ್ರಕರ್ತೆಯರು ವಾಪಸ್..

ತಿರುವನಂತಪುರಂ: ಸುಪ್ರೀಂ ಕೋರ್ಟ್ ಆದೇಶ, ಕೇರಳ ಪೊಲೀಸರ ಭಾರಿ ಭದ್ರತೆಯ ನಡುವೆಯೂ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶ ಅಸಾಧ್ಯವಾಗಿದ್ದು, ಶಬರಿಮಲೆಯಿಂದ ಮಹಿಳಾ ಪತ್ರಕರ್ತೆಯರು ವಾಪಸ್ ಆಗಿದ್ದಾರೆ.

ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳಾ ಪತ್ರಕರ್ತೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ಆಂಧ್ರ ಪ್ರದೇಶ ಮೂಲದ ಪತ್ರಕರ್ತೆ ಕವಿತಾ ಜಕ್ಕಲ್ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಶಬರಿಮಲೆಯತ್ತ ಪ್ರಯಾಣ ಆರಂಭಿಸಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆಗೆ ಅವರು ಮಣಿದಿದ್ದು, ಶಬರಿಮಲೆಯಿಂದ ವಾಪಸ್ ತೆರಳಲು ನಿರ್ಧರಿಸಿದ್ದಾರೆ.
ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ ಹೆಲ್ಮೆಟ್ ಹಾಗೂ ಸಮವಸ್ತ್ರ ಧರಿಸಿ ಭಾರೀ ಭದ್ರತೆಯ ಮೂಲಕ ದೇವಾಲಯದತ್ತ ತೆರಳಿದ್ದರು. ಮಹಿಳೆಯರು ಪಂಪಾ ದಾಟುತ್ತಿದ್ದಂತೆಯೇ ಪ್ರತಿಭಟನೆ ತೀವ್ರಗೊಂಡಿದ್ದು, ಸ್ವತಃ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರು ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಶಬರಿಲಮಯೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿ ಭಕ್ತರು ಕುಳಿತು ನಾವು ಸತ್ತರೂ ಸರಿಯೇ ಮೆಟ್ಟಿಲ ಮೂಲಕ ಮಹಿಳೆಯರು ತೆರಳಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಿಳಿದ ಪೊಲೀಸ್ ವರಿಷ್ಠಾಧಿಕಾರಿಗಳು ಪಥನಂತಿಟ್ಟ ಕಚೇರಿಯಲ್ಲಿ ಸಂಧಾನ ಸಭೆ ಆಯೋಜಿಸಿದರು. ಈ ವೇಳೆ ಕಚೇರಿಗೆ ಮಹಿಳಾ ಪತ್ರಕರ್ತೆಯರನ್ನೂ ಕರೆಸಿಕೊಂಡ ಅಧಿಕಾರಿಗಳು ಈ ಗಂಭೀರ ಪರಿಸ್ಥಿತಿಯಲ್ಲಿ ದೇವರ ದರ್ಶನ ಬೇಡ ಎಂದು ಪತ್ರಕರ್ತೆಯರ ಮನವೊಲಿಸಿದ್ದಾರೆ.
ಅಂತಿಮವಾಗಿ ಮಹಿಳಾ ಪತ್ರಕರ್ತೆಯರು ಶಬರಿಮಲೆಯಿಂದ ವಾಪಸ್ ತೆರಳು ನಿರ್ಧರಿಸಿದ್ದಾರೆ.
Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago