desha

ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಮಹಿಳಾ ಪತ್ರಕರ್ತೆಯರು ವಾಪಸ್..

ತಿರುವನಂತಪುರಂ: ಸುಪ್ರೀಂ ಕೋರ್ಟ್ ಆದೇಶ, ಕೇರಳ ಪೊಲೀಸರ ಭಾರಿ ಭದ್ರತೆಯ ನಡುವೆಯೂ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶ ಅಸಾಧ್ಯವಾಗಿದ್ದು, ಶಬರಿಮಲೆಯಿಂದ ಮಹಿಳಾ ಪತ್ರಕರ್ತೆಯರು ವಾಪಸ್ ಆಗಿದ್ದಾರೆ.

ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳಾ ಪತ್ರಕರ್ತೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ಆಂಧ್ರ ಪ್ರದೇಶ ಮೂಲದ ಪತ್ರಕರ್ತೆ ಕವಿತಾ ಜಕ್ಕಲ್ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಶಬರಿಮಲೆಯತ್ತ ಪ್ರಯಾಣ ಆರಂಭಿಸಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆಗೆ ಅವರು ಮಣಿದಿದ್ದು, ಶಬರಿಮಲೆಯಿಂದ ವಾಪಸ್ ತೆರಳಲು ನಿರ್ಧರಿಸಿದ್ದಾರೆ.
ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ ಹೆಲ್ಮೆಟ್ ಹಾಗೂ ಸಮವಸ್ತ್ರ ಧರಿಸಿ ಭಾರೀ ಭದ್ರತೆಯ ಮೂಲಕ ದೇವಾಲಯದತ್ತ ತೆರಳಿದ್ದರು. ಮಹಿಳೆಯರು ಪಂಪಾ ದಾಟುತ್ತಿದ್ದಂತೆಯೇ ಪ್ರತಿಭಟನೆ ತೀವ್ರಗೊಂಡಿದ್ದು, ಸ್ವತಃ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರು ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಶಬರಿಲಮಯೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿ ಭಕ್ತರು ಕುಳಿತು ನಾವು ಸತ್ತರೂ ಸರಿಯೇ ಮೆಟ್ಟಿಲ ಮೂಲಕ ಮಹಿಳೆಯರು ತೆರಳಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಿಳಿದ ಪೊಲೀಸ್ ವರಿಷ್ಠಾಧಿಕಾರಿಗಳು ಪಥನಂತಿಟ್ಟ ಕಚೇರಿಯಲ್ಲಿ ಸಂಧಾನ ಸಭೆ ಆಯೋಜಿಸಿದರು. ಈ ವೇಳೆ ಕಚೇರಿಗೆ ಮಹಿಳಾ ಪತ್ರಕರ್ತೆಯರನ್ನೂ ಕರೆಸಿಕೊಂಡ ಅಧಿಕಾರಿಗಳು ಈ ಗಂಭೀರ ಪರಿಸ್ಥಿತಿಯಲ್ಲಿ ದೇವರ ದರ್ಶನ ಬೇಡ ಎಂದು ಪತ್ರಕರ್ತೆಯರ ಮನವೊಲಿಸಿದ್ದಾರೆ.
ಅಂತಿಮವಾಗಿ ಮಹಿಳಾ ಪತ್ರಕರ್ತೆಯರು ಶಬರಿಮಲೆಯಿಂದ ವಾಪಸ್ ತೆರಳು ನಿರ್ಧರಿಸಿದ್ದಾರೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago