ಕೊಚ್ಚಿಃ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಕೃಪೆಯಿಂದಲೇ ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದು, ತಾವೊಬ್ಬರು ಅಯ್ಯಪ್ಪನ ಪರಮ ಭಕ್ತರು ಎಂದೂ ಕೂಡ ಹೇಳಿಕೊಂಡಿದ್ದಾರೆ.
ನಗರದಲ್ಲಿ ಜನತಾದಳ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ಕೇರಳ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ ಟಿ. ಥಾಮಸ್ ಸೇರಿದಂತೆ ಇತರ ಮುಖಂಡರ ಜತೆಗೆ ಶಬರಿಮಲೆಗೆ ಹೋಗುತ್ತಿದ್ದದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.
ಅಲ್ಲದೆ, 2005 ರಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ 2006 ರಲ್ಲಿಯೇ ಮುಖ್ಯ ಮಂತ್ರಿಯಾದೆ, ತದ ನಂತರ ಇದೀಗ ಮತ್ತೆ ಆ ಸ್ಥಾನ ಅಲಂಕರಿಸಿದ್ದೇನೆ. ಮುಖ್ಯವಾಗಿ ಈ ಬಾರಿ ಜೆಡಿಎಸ್ ಗೆ ಬಹುಮತ ಸಿಗದಿದ್ದರೂ ಮುಖ್ಯಮಂತ್ರಿ ಸ್ಥಾನ ದೊರೆತಿದೆ. ಇದಕ್ಕೆಲ್ಲ ಅಯ್ಯಪ್ಪ ಸ್ವಾಮಿಯ ಕೃಪೆಯೇ ಕಾರಣ.
ನಾನು ದೈವ ಭಕ್ತ. ದೇವರಲ್ಲಿ ನಂಬಿಕೆ ಇಟ್ಟುಕೊಂಡು ಬೆಳೆದವನು. ಎಲ್ಲವೂ ನಡೆಸಿಕೊಡುವಾತ ಅಯ್ಯಪ್ಪಸ್ವಾಮಿ ಆತನ ಮುಂದೆ ನಮ್ಮದೇನಿಲ್ಲ. ಸರ್ವಸ್ವವೂ ಆತನೆ ಇರುವಾಗ ನಮ್ಮದೇನಿದೆ. ನಾವು ಪಾತ್ರದಾರಿಗಳು ಮಾತ್ರ. ಉಳಿದೆಲ್ಲವು ಆ ದೇವರದ್ದೆ ಆಟ ಎಲ್ಲರೂ ದೇವಶಕ್ತಿಗೆ ತಲೆಬಾಗಲೇ ಬೇಕು ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಮತ್ತು ಕೇರಳ ಘಟಕದ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…