Featured

ಅಯ್ಯಪ್ಪಸ್ವಾಮಿ ಕೃಪೆಯಿಂದಲೇ ನಾನು CM ಆಗಿದ್ದು-ಕುಮಾರಸ್ವಾಮಿ

ಕೊಚ್ಚಿಃ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಕೃಪೆಯಿಂದಲೇ ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದು, ತಾವೊಬ್ಬರು ಅಯ್ಯಪ್ಪನ ಪರಮ ಭಕ್ತರು ಎಂದೂ ಕೂಡ ಹೇಳಿಕೊಂಡಿದ್ದಾರೆ.

ನಗರದಲ್ಲಿ ಜನತಾದಳ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ಕೇರಳ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ ಟಿ. ಥಾಮಸ್ ಸೇರಿದಂತೆ ಇತರ ಮುಖಂಡರ ಜತೆಗೆ ಶಬರಿಮಲೆಗೆ ಹೋಗುತ್ತಿದ್ದದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಅಲ್ಲದೆ, 2005 ರಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ 2006 ರಲ್ಲಿಯೇ ಮುಖ್ಯ ಮಂತ್ರಿಯಾದೆ, ತದ ನಂತರ ಇದೀಗ ಮತ್ತೆ ಆ ಸ್ಥಾನ ಅಲಂಕರಿಸಿದ್ದೇನೆ. ಮುಖ್ಯವಾಗಿ ಈ ಬಾರಿ ಜೆಡಿಎಸ್ ಗೆ ಬಹುಮತ ಸಿಗದಿದ್ದರೂ ಮುಖ್ಯಮಂತ್ರಿ ಸ್ಥಾನ ದೊರೆತಿದೆ. ಇದಕ್ಕೆಲ್ಲ ಅಯ್ಯಪ್ಪ ಸ್ವಾಮಿಯ ಕೃಪೆಯೇ ಕಾರಣ.

ನಾನು ದೈವ ಭಕ್ತ. ದೇವರಲ್ಲಿ ನಂಬಿಕೆ ಇಟ್ಟುಕೊಂಡು ಬೆಳೆದವನು. ಎಲ್ಲವೂ ನಡೆಸಿಕೊಡುವಾತ ಅಯ್ಯಪ್ಪಸ್ವಾಮಿ ಆತನ ಮುಂದೆ ನಮ್ಮದೇನಿಲ್ಲ. ಸರ್ವಸ್ವವೂ ಆತನೆ ಇರುವಾಗ ನಮ್ಮದೇನಿದೆ. ನಾವು ಪಾತ್ರದಾರಿಗಳು ಮಾತ್ರ. ಉಳಿದೆಲ್ಲವು ಆ ದೇವರದ್ದೆ ಆಟ ಎಲ್ಲರೂ ದೇವಶಕ್ತಿಗೆ ತಲೆಬಾಗಲೇ ಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಮತ್ತು ಕೇರಳ ಘಟಕದ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago