ಕೊಚ್ಚಿಃ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಕೃಪೆಯಿಂದಲೇ ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದು, ತಾವೊಬ್ಬರು ಅಯ್ಯಪ್ಪನ ಪರಮ ಭಕ್ತರು ಎಂದೂ ಕೂಡ ಹೇಳಿಕೊಂಡಿದ್ದಾರೆ.
ನಗರದಲ್ಲಿ ಜನತಾದಳ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ಕೇರಳ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ ಟಿ. ಥಾಮಸ್ ಸೇರಿದಂತೆ ಇತರ ಮುಖಂಡರ ಜತೆಗೆ ಶಬರಿಮಲೆಗೆ ಹೋಗುತ್ತಿದ್ದದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.
ಅಲ್ಲದೆ, 2005 ರಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ 2006 ರಲ್ಲಿಯೇ ಮುಖ್ಯ ಮಂತ್ರಿಯಾದೆ, ತದ ನಂತರ ಇದೀಗ ಮತ್ತೆ ಆ ಸ್ಥಾನ ಅಲಂಕರಿಸಿದ್ದೇನೆ. ಮುಖ್ಯವಾಗಿ ಈ ಬಾರಿ ಜೆಡಿಎಸ್ ಗೆ ಬಹುಮತ ಸಿಗದಿದ್ದರೂ ಮುಖ್ಯಮಂತ್ರಿ ಸ್ಥಾನ ದೊರೆತಿದೆ. ಇದಕ್ಕೆಲ್ಲ ಅಯ್ಯಪ್ಪ ಸ್ವಾಮಿಯ ಕೃಪೆಯೇ ಕಾರಣ.
ನಾನು ದೈವ ಭಕ್ತ. ದೇವರಲ್ಲಿ ನಂಬಿಕೆ ಇಟ್ಟುಕೊಂಡು ಬೆಳೆದವನು. ಎಲ್ಲವೂ ನಡೆಸಿಕೊಡುವಾತ ಅಯ್ಯಪ್ಪಸ್ವಾಮಿ ಆತನ ಮುಂದೆ ನಮ್ಮದೇನಿಲ್ಲ. ಸರ್ವಸ್ವವೂ ಆತನೆ ಇರುವಾಗ ನಮ್ಮದೇನಿದೆ. ನಾವು ಪಾತ್ರದಾರಿಗಳು ಮಾತ್ರ. ಉಳಿದೆಲ್ಲವು ಆ ದೇವರದ್ದೆ ಆಟ ಎಲ್ಲರೂ ದೇವಶಕ್ತಿಗೆ ತಲೆಬಾಗಲೇ ಬೇಕು ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಮತ್ತು ಕೇರಳ ಘಟಕದ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…