Featured

ಅಯ್ಯಪ್ಪ ಭಕ್ತರೊಂದಿಗೆ ಬಿಜೆಪಿ ಹಾಗು ಅರ್‌ಎಸ್‌ಎಸ್‌ನ ಕಾರ್ಯಕರ್ತರು ಬಂಡೆಯಂತೆ ನಿಂತಿದ್ದಾರೆ : ಅಮಿತ್‌ ಶಾ

ಕಣ್ಣೂರು, : ಶಬರಿಮಲೆ ದೇವಸ್ಥಾನದ ಆಚರಣೆಗಳ ರಕ್ಷಣೆಯ ವಿಚಾರದಲ್ಲಿ ಭಕ್ತರೊಂದಿಗೆ ಬಿಜೆಪಿ ಹಾಗು ಆರ್‌ಎಸ್‌ಎಸ್‌ನ ಕಾರ್ಯಕರ್ತರು ಹೆಬ್ಬಂಡೆಯಂತೆ ನಿಂತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.
ಕೇರಳದ ಕಣ್ಮೂರು ಜಿಲ್ಲೆಯ ತಾಳಿಕ್ಕಾವು’ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್’ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ
ಕೇರಳ ರಾಜ್ಯದಲ್ಲಿಂದು ಧಾರ್ಮಿಕ ನಂಬಿಕೆಗಳು ಹಾಗೂ ರಾಜ್ಯ ಸರ್ಕಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಬಿಜೆಪಿ, ಆರ್’ಎಸ್ಎಸ್ ಹಾಗೂ ಇತರೆ ಸಂಘಟನೆಗಳ 2000ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಲಾಗಿದೆ. ಬಿಜೆಪಿ ಅಯ್ಯಪ್ಪ ಭಕ್ತರ ಜೊತೆಗೆ ಬಂಡೆಯಂತೆ ನಿಂತಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೇರಳದ ಆಡಳಿತಾರೂಢ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಅವರು, ಶಬರಿಮಲೆ ಪ್ರತಿಭಟನಾಕಾರರ ವಿರುದ್ಧ ದೊಡ್ಡ ಮಟ್ಟದಲ್ಲಿ ಪೊಲೀಸ್‌ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಪಿಣರಾಯಿ ವಿಜಯನ್‌ ಸರಕಾರಕ್ಕೆ ಕೇರಳ ಹೈಕೋರ್ಟ್ ಖಡಕ್‌ ಎಚ್ಚರಿಕೆ ನೀಡಿದ್ದು, “ಅಮಾಯಕರ ಬಂಧನ ಕಂಡುಬಂದಲ್ಲಿ ಪರಿಣಾಮ ನೆಟ್ಟಗಿರದು” ಎಂದಿದೆ. ಸರ್ಕಾರದ ವರ್ತನೆ ಹೀಗೆಯೇ ಮುಂದುವರೆದರೆ, ಎಲ್’ಡಿಎಸ್ ಸರ್ಕಾರವನ್ನು ಕೆಳಗಿಳಿಸಲು ಬಿಜೆಪಿ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯದ ಪ್ರವೇಶದ ಮೂಲಕ ಲಿಂಗ ಸಮಾನತೆಯನ್ನು ಸಾಧಿಸಲು ಸಾಧ್ಯವಿಲ್ಲ. ಕೇರಳ ರಾಜ್ಯದಲ್ಲಿಂದು ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ. ಅಯ್ಯಪ್ಪ ಭಕ್ತರನ್ನು ಭೇದಿಸುವುದು ಬೆಂಕಿಯೊಂದಿಗೆ ಆಟವಾಡಿದಂತೆ ಎಂದು ಎಚ್ಚರಿಸಿದ್ದಾರೆ.
Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

5 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

5 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

5 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

6 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

6 hours ago