Featured

ಅಯ್ಯಪ್ಪ ಭಕ್ತರ ಪಾದಯಾತ್ರೆಗೆ ಜೊತೆಯಾದ ಶ್ವಾನ , ನಿರಂತರ ಪಾದಯಾತ್ರೆಯಲ್ಲಿ ಶಬರಿಮಲೆಯತ್ತ ಮಾಳಗಿ – Vishwanews24

ಅಯ್ಯಪ್ಪ ಭಕ್ತರ ಪಾದಯಾತ್ರೆಗೆ ಜೊತೆಯಾದ ಶ್ವಾನ , ನಿರಂತರ ಪಾದಯಾತ್ರೆಯಲ್ಲಿ ಶಬರಿಮಲೆಯತ್ತ ಮಾಳಗಿ

ಶಬರಿಮಲೆ ಪಾದಾಯಾತ್ರೆಗೆ ಹೊರಟಿದ್ದ ಅಯ್ಯಪ್ಪ ಸ್ವಾಮಿ ವೃತಾಧಾರಿಗಳೊಂದಿಗೆ ಶ್ವಾನವೊಂದು ಹೆಜ್ಜೆ ಹಾಕಿ ನೂರಾರು ಕಿ.ಮೀ ಕ್ರಮಿಸಿರುವ ಅಚ್ಚರಿಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಧಾರವಾಡದಿಂದ ಕೇರಳದ ಶಬರಿಮಲೆಗೆ ಹೊರಟ ಅಯ್ಯಪ್ಪ ಸ್ವಾಮಿ ಭಕ್ತರಾದ ನಾಗನಗೌಡ ಪಾಟೀಲ್, ಮಂಜು ಹಾಗೂ ರವಿ ಎನ್ನುವವರಿಗೆ ಮಾರ್ಗ ಮಧ್ಯೆ ಶ್ವಾನವೊಂದು ಜೊತೆಯಾಗಿದ್ದು, ವೃತಾಧಾರಿಗಳೊಂದಿಗೆ ತಾನು ಕೂಡ ನೂರಾರು ಕಿಲೋ ಮೀಟರ್‌ ಕ್ರಮಿಸಿದೆ.

ಮೂವರು ಭಕ್ತರು ಬರಿಗಾಲಿನಲ್ಲಿ ಧಾರವಾಡದಿಂದ ಯಾತ್ರೆ ಪ್ರಾರಂಭಿಸಿದಾಗ ಧಾರವಾಡದ ನರೇಂದ್ರ ಟೋಲ್ ಬಳಿ ಶ್ವಾನ ಜೊತೆಯಾಗಿದೆ. ಪ್ರಾರಂಭದಲ್ಲಿ ಶ್ವಾನ ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದು ಯಾರ ಗಮನಕ್ಕೆ ಬಂದಿರಲಿಲ್ಲ. ಆದರೆ ಬಹುದೂರ ಸಾಗಿ ಬಂದಾಗಲೂ ಶ್ವಾನ ತಮ್ಮ ತಂಡದ ಬೆನ್ನ ಹಿಂದೆಯೇ ಬರುತ್ತಿರುವುದನ್ನು ಕಂಡು ಸ್ವಾಮಿಗಳ ತಂಡ ಅಚ್ಚರಿಗೊಂಡಿದೆ. ಶ್ವಾನಕ್ಕೆ ತಿಂಡಿ ಹಾಕಿದ್ದಾರೆ. ಬಳಿಕವೂ ಹಿಂಬಾಲಿಸಿದೆ.

ಶ್ವಾನವನ್ನು ಹಿಂದೆ ಹೋಗಲಿ ಎಂದು ಓಡಿಸಿದ್ದರೂ ಕೂಡ ತೆರಳದೆ ನಿರಂತರವಾಗಿ 9 ದಿನಗಳ‌ ಕಾಲ ಜೊತೆ ಹೆಜ್ಜೆ ಹಾಕಿದೆ. ಪಾದಯಾತ್ರೆ ವೇಳೆ ಈ ತಂಡದ ಜೊತೆಗ ಹೆಜ್ಜೆ ಹಾಕುವ ಶ್ವಾನ, ವೃತಧಾರಿಗಳ ತಂಡ ವಿಶ್ರಾಂತಿ ಪಡೆಯುವ‌ ಸಂದರ್ಭ ಅದೂ ವಿಶ್ರಾಂತಿ ಪಡೆಯುತ್ತದೆ. ಮುಂಜಾನೆ ಬೇಗ ಈ ತಂಡದ ಜೊತೆಗೆ ಹೆಜ್ಜೆ ಹಾಕಲು ಆರಂಭಿಸುವ ಶ್ವಾನ, ತಂಡದಿಂದ ಸುಮಾರು ಮುಂದೆ ಹೋಗಿ ತಂಡದ ದಾರಿ ಕಾಯುತ್ತದೆ ಎನ್ನಲಾಗಿದೆ.

ಇನ್ನು ಈ ಪ್ರೀತಿಯ ಶ್ವಾನಕ್ಕೆ ಮಾಳಗಿ ಎಂದು ಹೆಸರಿಸಿದ್ದಾರೆ. ಮಾಳಗಿ ಎಂದರೆ ಶಬರಿಮಲೆಗೆ ಬರುವ ಮಹಿಳಾ ವೃತ್ತಧಾರಿಗಳನ್ನು ಮಾಳಿಗೆಪುರತ್ತಮ್ಮ ಅಂತಾ ಕರೆಯುತ್ತಾರೆ. ಹೀಗಾಗಿ ಶಬರಿಮಲೆ ಪಾದಯಾತ್ರೆಗೆ ಜೊತೆಯಾದ ಶ್ವಾನಕ್ಕೆ ಮಾಳಗಿ ಎಂದು ಹೆಸರನ್ನು ಇಡಲಾಗಿದೆ. ಮಾಳಗಿ ಈಗ ನಾಗನಗೌಡ ಪಾಟೀಲ್ , ಮಂಜು ಹಾಗೂ ರವಿ ಅವರ ಪ್ರೀತಿಯ ಶ್ವಾನವಾಗಿದೆ.

ಒಟ್ಟಾರೆ ಭಕ್ತಿಯ ಮಹಿಮೆ ಎಂಬಂತೆ ಶಬರಿಮಲೆ ಯಾತ್ರಿಕರನ್ನು ಹಿಂಬಾಲಿಸಿದ ಶ್ವಾನವೊಂದು ಸಹಸ್ರಾರು ಕಿ.ಮೀ ಚಾರಣ ಮಾಡುತ್ತಿರುವುದು ಎಲ್ಲರಲ್ಲೂ ಅಚ್ಚರಿಮೂಡಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago