ಕಾಪು: ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಾಗೂ ಅಯ್ಯಪ್ಪ ಸೇವಾ ಸಮಾಜ ಕಾಪು ವಲಯದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಅವರಿಗೆ ಅಯ್ಯಪ್ಪ ಸೇವಾ ಸಮಾಜ ಕಾಪು ವಲಯ ವತಿಯಿಂದ ಕಾಪು ಲಕ್ಷ್ಮಿ ಜನಾರ್ಧನ ಸಭಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹರೀಶ್ ಶೆಟ್ಟಿ, ಉಚ್ಚಿಲ ಪರಿಸರದ ಹೆಚ್ಚಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸುಮಾರು 20 ವರ್ಷಗಳಿಂದ ನಿರಂತರವಾಗಿ ಅಯ್ಯಪ್ಪ ಸ್ವಾಮಿ ವ್ರತ ಕೈಗೊಳ್ಳುತ್ತಿದ್ದು, ಹಿರಿಯ, ಕಿರಿಯ ವ್ರತಧಾರಿಗಳಿಗೆ ಮಾರ್ಗದರ್ಶಕರಾಗಿದ್ದರು. ಅವರ ಆದರ್ಶ ಇತರರಿಗೆ ಮಾದರಿ ಎಂದು ಸಮಾಜ ಸೇವಕ, ರಂಗ ತರಂಗ ಸಂಸ್ಥೆ ಮುಖ್ಯಸ್ಥ ಕರಂದಾಡಿ ಲೀಲಾಧರ ಶೆಟ್ಟಿ ನುಡಿನಮನ ಸಲ್ಲಿಸಿದರು.
ಶ್ರೀ ಅಯ್ಯಪ್ಪ ಸೇವಾ ಸಮಾಜದ ಜಿಲ್ಲಾ ಉಪಾಧ್ಯಕ್ಷ ಗೋಪಾಲ ಪೂಜಾರಿ, ಕಾರ್ಯಾಧ್ಯಕ್ಷ ರಘುರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ, ಅನಿಲ್ ಶೆಟ್ಟಿ ಕೊಪ್ಪಲಂಗಡಿ, ಜಿತೇಶ್, ಶ್ರೀಧರ್ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…