ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.
ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿದೆ.. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.
ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪತ್ತೆ
ಅಪಾಯಕಾರಿ ಮಟ್ಟದಲ್ಲಿ ಕೀಟನಾಶಕದ ಉಳಿಕೆ ಇರುವ ಏಲಕ್ಕಿ ಬಳಸಿ ಸಿದ್ಧಪಡಿಸಿದ ಪ್ರಸಾದವನ್ನು ಭಕ್ತರಿಗೆ ನೀಡುವಂತಿಲ್ಲ. ಈ ಆದೇಶ ಪಾಲನೆಯ ಖಾತ್ರಿಯ ಹೊಣೆಯು ಆಹಾರ ಸುರಕ್ಷಾ ಆಯುಕ್ತರದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಪ್ರಯೋಗಾಲಯದ ವರದಿಯ ಪ್ರಕಾರ, ಈ ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪ್ರಮಾಣವು ಗರಿಷ್ಠ ಮಿತಿಯನ್ನು ಮೀರಿದೆ (Maximum Residue Limit – MRL). ಡಿತಿಯೊಕಾರ್ಬಮೇಟ್ಸ್, ಸೈಪರ್ಮೆತರಿನ್, ಇಮಿಡಾಕ್ಲೊಪ್ರಿಡ್ ಪ್ರಮಾಣ ಗಣನೀಯ ಮಟ್ಟದಲ್ಲಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…