ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.
ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿದೆ.. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.
ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪತ್ತೆ
ಅಪಾಯಕಾರಿ ಮಟ್ಟದಲ್ಲಿ ಕೀಟನಾಶಕದ ಉಳಿಕೆ ಇರುವ ಏಲಕ್ಕಿ ಬಳಸಿ ಸಿದ್ಧಪಡಿಸಿದ ಪ್ರಸಾದವನ್ನು ಭಕ್ತರಿಗೆ ನೀಡುವಂತಿಲ್ಲ. ಈ ಆದೇಶ ಪಾಲನೆಯ ಖಾತ್ರಿಯ ಹೊಣೆಯು ಆಹಾರ ಸುರಕ್ಷಾ ಆಯುಕ್ತರದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಪ್ರಯೋಗಾಲಯದ ವರದಿಯ ಪ್ರಕಾರ, ಈ ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪ್ರಮಾಣವು ಗರಿಷ್ಠ ಮಿತಿಯನ್ನು ಮೀರಿದೆ (Maximum Residue Limit – MRL). ಡಿತಿಯೊಕಾರ್ಬಮೇಟ್ಸ್, ಸೈಪರ್ಮೆತರಿನ್, ಇಮಿಡಾಕ್ಲೊಪ್ರಿಡ್ ಪ್ರಮಾಣ ಗಣನೀಯ ಮಟ್ಟದಲ್ಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…