ತೊಡಿಕಾನ : ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು – Vishwanews24

Featured, ದಕ್ಷಿಣ ಕನ್ನಡ

ಅರಂತೋಡು: ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು

ತೊಡಿಕಾನ: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ 58 ಎಂದು ಗುರುತಿಸಲಾಗಿದೆ.ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹ ಹೊಳೆಯಲ್ಲಿದ್ದು ಪೊಲೀಸರು ಮತ್ತು ಮನೆಯವರು ಬಂದ ಬಳಿಕ ತೆಗೆಯಲಾಗುವುದೆಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ

ಉಡುಪಿ : ಮಕ್ಕಳ ದಿನಾಚರಣೆ – ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ :- Vishwanews24

Leave a Reply