Featured

ಅರಗ ಜ್ಞಾನೇಂದ್ರರೇ ನಿಮ್ಮ ರಾಜಕೀಯ ತೆವಲಿಗೆ ನಮ್ಮ ತುಳುನಾಡಿನ ದೈವಗಳ ವಿಷಯ ಬಳಸಬೇಡಿ: ರಮೇಶ್ ಕಾಂಚನ್ – Vishwanews24

ಅರಗ ಜ್ಞಾನೇಂದ್ರರೇ ನಿಮ್ಮ ರಾಜಕೀಯ ತೆವಲಿಗೆ ನಮ್ಮ ತುಳುನಾಡಿನ ದೈವಗಳ ವಿಷಯ ಬಳಸಬೇಡಿ: ರಮೇಶ್ ಕಾಂಚನ್

ತೀರ್ಥಹಳ್ಳಿಯ ಸಭೆಯೊಂದರಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ತುಳುನಾಡಿನ ಆರಾಧ್ಯ ದೈವವಾದ ಗುಳಿಗನಿಗೆ ಅವಮಾನ ಮಾಡಿದ್ದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಬಿಜೆಪಿ ಪಕ್ಷದ ಶಾಸಕರು, ಸಚಿವರು ಹಾಗೂ ಹಲವಾರು ನಾಯಕರು ತುಳು ಭಾಷೆ, ತುಳು ಸಂಸ್ಕೃತಿಯನ್ನು ಹೀಯಾಳಿಸುತ್ತ ಬಂದಿದ್ದಾರೆ. ಹಲವು ದಿನಗಳ ಹಿಂದೆ ಅಧಿವೇಶನದಲ್ಲಿ ಕಾನೂನು ಸಚಿವರಾದ ಮಾಧುಸ್ವಾಮಿ ಅವರು ತುಳು ಭಾಷೆಯನ್ನು ಅವಮಾನ ಮಾಡಿದ್ದನ್ನು ನೋಡಿದ್ದೇವೆ. ಸಭೆಯೊಂದರಲ್ಲಿ ಸಿ.ಟಿ ರವಿ ಅವರು ಪಂಜುರ್ಲಿ ಹಾಗೂ ಗುಳಿಗ ದೈವಗಳು ತಮ್ಮ ಪಕ್ಷದ ಪರ ಇದ್ದಾರೆ ಎಂದು ಹೇಳಿದ್ದನ್ನು ನೋಡಿದ್ದೇವೆ. ಬಿಜೆಪಿ ಪಕ್ಷದ ನಾಯಕರಿಗೆ ಹಿಂದೂ ಧರ್ಮ ಎಂಬುದು ಕೇವಲ ಚುನಾವಣೆಯ ಅಸ್ತ್ರವಾಗಿದೆ. ಚುನಾವಣೆಯ ಸಮಯದಲ್ಲಿ ನಾವು ಹಿಂದೂ ಧರ್ಮದ ರಕ್ಷಣೆಗಾಗಿ ಬಂದವರು ಎಂದು ಬೊಗಳೆ ಬಿಡುವ ಇವರು ಬೇರೆ ಸಂದರ್ಭಗಳಲ್ಲಿ ಧರ್ಮದ ಬಗ್ಗೆ ತುಚ್ಛವಾಗಿ ಮಾತನಾಡಿಕೊಳ್ಳುತ್ತಾರೆ.

ಅರಗ ಜ್ಞಾನೇಂದ್ರ ಅವರೇ, ತುಳುನಾಡಿನಲ್ಲಿ ಹುಟ್ಟಿದ ನಾವು ಧನ್ಯರು. ಇಲ್ಲಿನ ದೈವಗಳಿಗೆ ಅಪಾರ ಶಕ್ತಿ ಇದೆ. ನಿಮ್ಮ ರಾಜಕೀಯ ತೆವಲಿಗೆ ನಮ್ಮ ದೈವಗಳ ವಿಷಯವನ್ನು ಬಳಸಬೇಡಿ. ತುಳುನಾಡಿನ ಜನರು ನಿಮ್ಮ ಈ ಕಪಟ ಧರ್ಮ ಪ್ರೇಮವನ್ನು ಅರಿತುಕೊಂಡಿದ್ದಾರೆ.

ಜನರಿಗೆ ನೀಡಿದ ಆಶ್ವಾಸನೆಯನ್ನು ಮೊದಲು ಈಡೇರಿಸಿ ಜೊತೆಗೆ ದೈವಾರಾಧಕರಿಗೆ ತಾವು ಮಾಸಿಕವಾಗಿ ರೂ. 2000 ನೀಡುತ್ತೇವೆ ಎಂದು ಘೋಷಿಸಿರುವ ಯೋಜನೆಯನ್ನು ಮೊದಲು ನೀಡಿ. ಕರಾವಳಿ ಭಾಗದಲ್ಲಿ ಅತ್ಯಂತ ಪೂಜನೀಯವಾಗಿ ಆರಾಧಿಸುವಂತ ದೈವಗಳ ಬಗ್ಗೆ, ದೈವಾರಾಧನೆ ಬಗ್ಗೆ, ತುಳು ಭಾಷೆಯ ಬಗ್ಗೆ ಮಾತನಾಡುವುದ್ದನ್ನು ನಿಲ್ಲಿಸಿ. ಗುಳಿಗ ದೈವದ ಬಗ್ಗೆ ಲಘುವಾಗಿ ಮಾತನಾಡಿದ ನೀವು ತಕ್ಷಣ ಕ್ಷಮೆ ಯಾಚಿಸಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಜನರು ನಿಮ್ಮ ಈ ಕಪಟ ಧರ್ಮ ಪ್ರೇಮಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago