Featured

ಅರಣ್ಯದಲ್ಲಿ ಪ್ರದೇಶದಲ್ಲಿ ಯಾವುದೇ  ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ – vishwanews24

ಅರಣ್ಯದಲ್ಲಿ ಪ್ರದೇಶದಲ್ಲಿ ಯಾವುದೇ  ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಅಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸಚಿವ ಖಂಡ್ರೆ ಸೂಚಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago