Featured

ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆಯ ಮಿಗ್ 29ಕೆ ತರಬೇತಿ ವಿಮಾನ ಪತನ, ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ನಾಪತ್ತೆ -Vishwanews24

ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆಯ ಮಿಗ್ 29ಕೆ ತರಬೇತಿ ವಿಮಾನ ಪತನ, ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ನಾಪತ್ತೆ -Vishwanews24

ಹೊಸದಿಲ್ಲಿ: ಭಾರತೀಯ ನೌಕಾಪಡೆ ಸೇರಿದ ಮಿಗ್ -29ಕೆ ತರಬೇತುದಾರ ವಿಮಾನ ಗುರುವಾರ ಸಂಜೆ ಪತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರಬ್ಬಿ ಸಮುದ್ರದಲ್ಲಿ ತರಬೇತುದಾರ ವಿಮಾನ ಪತನವಾಗಿದ್ದು, ಓರ್ವ ಪೈಲಟ್ ಬಚಾವ್ ಆಗಿದ್ದು ಮತ್ತೋರ್ವ ಪೈಲಟ್‌ ನಾಪತ್ತೆಯಾಗಿದ್ದಾನೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ.

ಅಪಘಾತದ ವೇಳೆ ಒಬ್ಬ ಪೈಲಟ್‌ ಕೂಡಲೇ ತನ್ನನ್ನು ತಾನು ರಕ್ಷಿಸಿಕೊಂಡರೆ ಮತ್ತೊರ್ವ ನಾಪತ್ತೆಯಾಗಿದ್ದಾನೆ. ಈತನಿಗಾಗಿ ಇದೀಗ ಶೋಧ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಸಂಬಂಧ ನೌಕಾಪಡೆ ಅಪಘಾತದ ಕಾರಣವನ್ನು ಕಂಡುಹಿಡಿಯುವ ಉದ್ದೇಶದಿಂದ ಸಂಬಂಧಪಟ್ಟ ಅಧಿಕಾರಿಗಳು ತನಿಖೆಗೆ ಆದೇಶಿಸಿದೆ.

ಮಿಗ್ 29ಕೆ ತರಬೇತಿ ವಿಮಾನ ಅರಬ್ಬಿ ಸಮುದ್ರ ಪ್ರದೇಶದಲ್ಲಿ ಸಂಭವಿಸಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ವರದಿ ವಿವರಿಸಿದೆ.

ಭಾರತೀಯ ನೌಕಾಪಡೆಯಲ್ಲಿ 40ಕ್ಕೂ ಅಧಿಕ ಮಿಗ್ 29 ಯುದ್ಧ ವಿಮಾನಗಳಿದ್ದು, ಇವುಗಳು ಗೋವಾ ಹಾಗೂ ಐಎನ್ ಎಸ್ ವಿಕ್ರಮಾದಿತ್ಯದ ಮೂಲಕ ಕಾರ್ಯಾಚರಿಸುತ್ತಿರುವುದಾಗಿ ತಿಳಿದು ಬಂದಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago