ಉಡುಪಿ: ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ಎರಡು ದೋಣಿಗಳು ಸಮುದ್ರ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕ್ಕಿ ಮುಳುಗಿ ಹೋಗಿದ್ದು, ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಮೀನುಗಾರಿಕೆ ದೋಣಿಗಳು ಭಟ್ಕಳದ ಗಂಗೊಳ್ಳಿ ನಡುವೆ ಮುಳುಗಡೆಯಾಗಿದೆ. ಎರಡು ಪ್ರತ್ಯೇಕ ದೋಣಿಗಳು ಮಲ್ಪೆಗೆ ಮರಳುವಾಗ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ 16 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಣೆಯ ವೀಡಿಯೊ ಬಹಳ ರೋಚಕವಾಗಿದ್ದು, ಕಣ್ಣೆದುರೇ ಎರಡು ಕೋಟಿ ಬೆಲೆಯ ದೋಣಿಗಳು ಮುಳುಗಡೆಯಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾತಾವರಣ ಏರುಪೇರಾದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಶನಿವಾರ ಬೆಳಗ್ಗೆ ಮಲ್ಪೆಯಿಂದ ತೆರಳಿದ 8 ಮಂದಿಯಿದ್ದ ಶಿವ-ಗಣೇಶ ದೋಣಿಯು ಸಂಜೆಯ ವೇಳೆಗೆ ತೀವ್ರವಾದ ಗಾಳಿ-ಮಳೆಯಿಂದಾಗಿ ಸಮುದ್ರದಲ್ಲಿ ನೀರಿನ ಅಲೆಗಳ ಆರ್ಭಟ ಜೋರಾಗಿದ್ದರಿಂದ ದೋಣಿಯಲ್ಲಿ ತೂತು ಬಿದ್ದು, ದೋಣಿ ಮುಳುಗಡೆಯಾಗಲು ಶುರುವಾಗಿದೆ. ದೋಣಿಯಲ್ಲಿದ್ದ ಮೀನುಗಾರರು ಮಲ್ಪೆಗೆ ಕರೆ ಮಾಡಿ ರಕ್ಷಣೆಗೆ ಕರೆದಿದ್ದಾರೆ. ಕೂಡಲೇ ಮಲ್ಪೆಯಿಂದ ತೆರಳಿದ ದೋಣಿಗಳ ಮೂಲಕ ಮುಳುಗಡೆಯಾಗುತ್ತಿದ್ದ ದೋಣಿಯಿಂದ 8 ಮಂದಿ ಮೀನುಗಾರರನ್ನು ರಕ್ಷಿಸಿ ಮಲ್ಪೆಗೆ ಕರೆತರಲಾಗಿದೆ.
ಇದಲ್ಲದೇ ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ಮಲ್ಪೆಗೆ ಮರಳುತ್ತಿದ್ದ ಪದ್ಮದಾಸ್ ಎಂಬ ದೋಣಿಯು ಗಂಗೊಳ್ಳಿ ಹಾಗೂ ಭಟ್ಕಳದ ನಡುವೆ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಮೀನುಗಾರರ ಮಾಹಿತಿಯಿಂದ ಸ್ಥಳಕ್ಕೆ ತೆರಳಿದ ಮಲ್ಪೆಯ ಭಜರಂಗಿ ದೋಣಿಯ ಮೀನುಗಾರರು 8 ಮಂದಿ ಮೀನುಗಾರರನ್ನು ರಕ್ಷಿಸಿ ಮಲ್ಪೆಗೆ ಕರೆತಂದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…