ಉಡುಪಿ: ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ಎರಡು ದೋಣಿಗಳು ಸಮುದ್ರ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕ್ಕಿ ಮುಳುಗಿ ಹೋಗಿದ್ದು, ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಮೀನುಗಾರಿಕೆ ದೋಣಿಗಳು ಭಟ್ಕಳದ ಗಂಗೊಳ್ಳಿ ನಡುವೆ ಮುಳುಗಡೆಯಾಗಿದೆ. ಎರಡು ಪ್ರತ್ಯೇಕ ದೋಣಿಗಳು ಮಲ್ಪೆಗೆ ಮರಳುವಾಗ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ 16 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಣೆಯ ವೀಡಿಯೊ ಬಹಳ ರೋಚಕವಾಗಿದ್ದು, ಕಣ್ಣೆದುರೇ ಎರಡು ಕೋಟಿ ಬೆಲೆಯ ದೋಣಿಗಳು ಮುಳುಗಡೆಯಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾತಾವರಣ ಏರುಪೇರಾದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಶನಿವಾರ ಬೆಳಗ್ಗೆ ಮಲ್ಪೆಯಿಂದ ತೆರಳಿದ 8 ಮಂದಿಯಿದ್ದ ಶಿವ-ಗಣೇಶ ದೋಣಿಯು ಸಂಜೆಯ ವೇಳೆಗೆ ತೀವ್ರವಾದ ಗಾಳಿ-ಮಳೆಯಿಂದಾಗಿ ಸಮುದ್ರದಲ್ಲಿ ನೀರಿನ ಅಲೆಗಳ ಆರ್ಭಟ ಜೋರಾಗಿದ್ದರಿಂದ ದೋಣಿಯಲ್ಲಿ ತೂತು ಬಿದ್ದು, ದೋಣಿ ಮುಳುಗಡೆಯಾಗಲು ಶುರುವಾಗಿದೆ. ದೋಣಿಯಲ್ಲಿದ್ದ ಮೀನುಗಾರರು ಮಲ್ಪೆಗೆ ಕರೆ ಮಾಡಿ ರಕ್ಷಣೆಗೆ ಕರೆದಿದ್ದಾರೆ. ಕೂಡಲೇ ಮಲ್ಪೆಯಿಂದ ತೆರಳಿದ ದೋಣಿಗಳ ಮೂಲಕ ಮುಳುಗಡೆಯಾಗುತ್ತಿದ್ದ ದೋಣಿಯಿಂದ 8 ಮಂದಿ ಮೀನುಗಾರರನ್ನು ರಕ್ಷಿಸಿ ಮಲ್ಪೆಗೆ ಕರೆತರಲಾಗಿದೆ.
ಇದಲ್ಲದೇ ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ಮಲ್ಪೆಗೆ ಮರಳುತ್ತಿದ್ದ ಪದ್ಮದಾಸ್ ಎಂಬ ದೋಣಿಯು ಗಂಗೊಳ್ಳಿ ಹಾಗೂ ಭಟ್ಕಳದ ನಡುವೆ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಮೀನುಗಾರರ ಮಾಹಿತಿಯಿಂದ ಸ್ಥಳಕ್ಕೆ ತೆರಳಿದ ಮಲ್ಪೆಯ ಭಜರಂಗಿ ದೋಣಿಯ ಮೀನುಗಾರರು 8 ಮಂದಿ ಮೀನುಗಾರರನ್ನು ರಕ್ಷಿಸಿ ಮಲ್ಪೆಗೆ ಕರೆತಂದಿದ್ದಾರೆ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…