ಉಡುಪಿ: ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ಎರಡು ದೋಣಿಗಳು ಸಮುದ್ರ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕ್ಕಿ ಮುಳುಗಿ ಹೋಗಿದ್ದು, ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಮೀನುಗಾರಿಕೆ ದೋಣಿಗಳು ಭಟ್ಕಳದ ಗಂಗೊಳ್ಳಿ ನಡುವೆ ಮುಳುಗಡೆಯಾಗಿದೆ. ಎರಡು ಪ್ರತ್ಯೇಕ ದೋಣಿಗಳು ಮಲ್ಪೆಗೆ ಮರಳುವಾಗ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ 16 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಣೆಯ ವೀಡಿಯೊ ಬಹಳ ರೋಚಕವಾಗಿದ್ದು, ಕಣ್ಣೆದುರೇ ಎರಡು ಕೋಟಿ ಬೆಲೆಯ ದೋಣಿಗಳು ಮುಳುಗಡೆಯಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾತಾವರಣ ಏರುಪೇರಾದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಶನಿವಾರ ಬೆಳಗ್ಗೆ ಮಲ್ಪೆಯಿಂದ ತೆರಳಿದ 8 ಮಂದಿಯಿದ್ದ ಶಿವ-ಗಣೇಶ ದೋಣಿಯು ಸಂಜೆಯ ವೇಳೆಗೆ ತೀವ್ರವಾದ ಗಾಳಿ-ಮಳೆಯಿಂದಾಗಿ ಸಮುದ್ರದಲ್ಲಿ ನೀರಿನ ಅಲೆಗಳ ಆರ್ಭಟ ಜೋರಾಗಿದ್ದರಿಂದ ದೋಣಿಯಲ್ಲಿ ತೂತು ಬಿದ್ದು, ದೋಣಿ ಮುಳುಗಡೆಯಾಗಲು ಶುರುವಾಗಿದೆ. ದೋಣಿಯಲ್ಲಿದ್ದ ಮೀನುಗಾರರು ಮಲ್ಪೆಗೆ ಕರೆ ಮಾಡಿ ರಕ್ಷಣೆಗೆ ಕರೆದಿದ್ದಾರೆ. ಕೂಡಲೇ ಮಲ್ಪೆಯಿಂದ ತೆರಳಿದ ದೋಣಿಗಳ ಮೂಲಕ ಮುಳುಗಡೆಯಾಗುತ್ತಿದ್ದ ದೋಣಿಯಿಂದ 8 ಮಂದಿ ಮೀನುಗಾರರನ್ನು ರಕ್ಷಿಸಿ ಮಲ್ಪೆಗೆ ಕರೆತರಲಾಗಿದೆ.
ಇದಲ್ಲದೇ ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ಮಲ್ಪೆಗೆ ಮರಳುತ್ತಿದ್ದ ಪದ್ಮದಾಸ್ ಎಂಬ ದೋಣಿಯು ಗಂಗೊಳ್ಳಿ ಹಾಗೂ ಭಟ್ಕಳದ ನಡುವೆ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಮೀನುಗಾರರ ಮಾಹಿತಿಯಿಂದ ಸ್ಥಳಕ್ಕೆ ತೆರಳಿದ ಮಲ್ಪೆಯ ಭಜರಂಗಿ ದೋಣಿಯ ಮೀನುಗಾರರು 8 ಮಂದಿ ಮೀನುಗಾರರನ್ನು ರಕ್ಷಿಸಿ ಮಲ್ಪೆಗೆ ಕರೆತಂದಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…