Featured

ಅರಬ್‍ ದೇಶದಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ -Vishwanews24

ಅಬೂಧಾಬಿ:ಅರಬ್‍ ದೇಶದಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಹಿಂದೂ ಮಂದಿರಕ್ಕೆ ಶಿಲಾನ್ಯಾಸ ಮಾಡಲಾಯಿತು.

ಈ ದೇವಸ್ಥಾನವನ್ನು ನಿರ್ಮಿಸುತ್ತಿರುವ ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್‌) ಇದರ ಆಧ್ಯಾತ್ಮಿಕ ಗುರುಗಳಾದ ಮಹಾಂತ ಸ್ವಾಮಿ ಮಹಾರಾಜ್‌ ಅವರು ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಮಾರು ನಾಲ್ಕು ತಾಸುಗಳ ಕಾಲ ವಿಧ್ಯುಕ್ತವಾಗಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪೂಜಿತ ಇಟ್ಟಿಗೆಗಳನ್ನು ಮುಖ್ಯ ಪೂಜಾ ಸ್ಥಳದಲ್ಲಿ ಸ್ಥಾಪಿಸಲಾಯಿತು.

ಯುಎಇಯಲ್ಲಿ ಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಭಾರತೀಯ ರಾಯಭಾರಿ ನವದೀಪ್‍ ಸೂರಿಯವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರದ ಮೂಲಕ ಶುಭಾಶಯ ಕಳಿಸಿದ್ರು. ಕಾರ್ಯಕ್ರಮದಲ್ಲಿ ಪತ್ರ ಓದಿದ ನವದೀಪ್‍ ಸೂರಿಯವರು ಮಾನವೀಯ ಮೌಲ್ಯಗಳು, ಧಾರ್ಮಿಕ ನಂಬಿಕೆಗಳು ಉಭಯ ದೇಶಗಳ ಪರಂಪರೆಯನ್ನು ಅರಿಯಲಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಹಾಗೆಯೇ ಯುವರಾಜ ಶೇಖ್‍ ಮೊಹಮ್ಮದ್‍ಗೆ ಎಲ್ಲಾ ಭಾರತೀಯರ ಪರವಾಗಿ ಪ್ರಧಾನಿ ಶುಭಾಶಯ ತಿಳಿಸಿದ್ದಾರೆ ಎಂದರು. ಇದೇ ವೇಳೆ ಯುಎಇನಲ್ಲಿ ನಿರ್ಮಾಣವಾಗ್ತಿರುವ ಈ ಮಂದಿರ ಇಲ್ಲಿರುವ 33 ಲಕ್ಷ ಭಾರತೀಯರಿಗೆ ಸ್ಪೂರ್ತಿಯಾಗಲಿದೆ ಅಂತಾ ರಾಯಭಾರಿ ನವದೀಪ್‍ ಸೂರಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago