ಅಬೂಧಾಬಿ:ಅರಬ್ ದೇಶದಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಹಿಂದೂ ಮಂದಿರಕ್ಕೆ ಶಿಲಾನ್ಯಾಸ ಮಾಡಲಾಯಿತು.
ಈ ದೇವಸ್ಥಾನವನ್ನು ನಿರ್ಮಿಸುತ್ತಿರುವ ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಇದರ ಆಧ್ಯಾತ್ಮಿಕ ಗುರುಗಳಾದ ಮಹಾಂತ ಸ್ವಾಮಿ ಮಹಾರಾಜ್ ಅವರು ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಮಾರು ನಾಲ್ಕು ತಾಸುಗಳ ಕಾಲ ವಿಧ್ಯುಕ್ತವಾಗಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪೂಜಿತ ಇಟ್ಟಿಗೆಗಳನ್ನು ಮುಖ್ಯ ಪೂಜಾ ಸ್ಥಳದಲ್ಲಿ ಸ್ಥಾಪಿಸಲಾಯಿತು.
ಯುಎಇಯಲ್ಲಿ ಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಭಾರತೀಯ ರಾಯಭಾರಿ ನವದೀಪ್ ಸೂರಿಯವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರದ ಮೂಲಕ ಶುಭಾಶಯ ಕಳಿಸಿದ್ರು. ಕಾರ್ಯಕ್ರಮದಲ್ಲಿ ಪತ್ರ ಓದಿದ ನವದೀಪ್ ಸೂರಿಯವರು ಮಾನವೀಯ ಮೌಲ್ಯಗಳು, ಧಾರ್ಮಿಕ ನಂಬಿಕೆಗಳು ಉಭಯ ದೇಶಗಳ ಪರಂಪರೆಯನ್ನು ಅರಿಯಲಿವೆ ಎಂದು ಪ್ರಧಾನಿ ಹೇಳಿದ್ದಾರೆ.
ಹಾಗೆಯೇ ಯುವರಾಜ ಶೇಖ್ ಮೊಹಮ್ಮದ್ಗೆ ಎಲ್ಲಾ ಭಾರತೀಯರ ಪರವಾಗಿ ಪ್ರಧಾನಿ ಶುಭಾಶಯ ತಿಳಿಸಿದ್ದಾರೆ ಎಂದರು. ಇದೇ ವೇಳೆ ಯುಎಇನಲ್ಲಿ ನಿರ್ಮಾಣವಾಗ್ತಿರುವ ಈ ಮಂದಿರ ಇಲ್ಲಿರುವ 33 ಲಕ್ಷ ಭಾರತೀಯರಿಗೆ ಸ್ಪೂರ್ತಿಯಾಗಲಿದೆ ಅಂತಾ ರಾಯಭಾರಿ ನವದೀಪ್ ಸೂರಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…