Featured

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು – vishwanews24

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ  ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ವೀಕ್ಷಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ.ಇ

415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.

ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ.

ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ರೆಡಿಯಾಗಿದ್ದು, ಸತತ ಆರನೇ ಬಾರಿಗೆ ರಾಜಗಾಂಭೀರ್ಯದಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಅಭಿಮನ್ಯು ಸೇರಿ ಇತರ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ದಸರಾ ಗಜಪಡೆ
ಅಂಬಾರಿ ಆನೆ : ಕ್ಯಾಪ್ಟನ್ ಅಭಿಮನ್ಯು, 59 ವರ್ಷ, 6ನೇ ಬಾರಿ ಅಂಬಾರಿ
ಕುಮ್ಕಿ ಆನೆ : ಕಾವೇರಿ ಮತ್ತು ರೂಪ
ನಿಶಾನೆ ಆನೆ : ಧನಂಜಯ , 45 ವರ್ಷ
ನೌಪತ್ ಆನೆ : ಗೋಪಿ, 42 ವರ್ಷ
ಸಾಲಾನೆ : ಭೀಮ, 25 ವರ್ಷ
ಪಟ್ಟದ ಆನೆ : ಶ್ರೀಕಂಠ ಮತ್ತು ಲಕ್ಷ್ಮಿ
ಸಾಲಾನೆಗಳು: ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗದಲ್ಲಿ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago