Featured

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು – vishwanews24

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ  ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ವೀಕ್ಷಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ.ಇ

415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.

ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ.

ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ರೆಡಿಯಾಗಿದ್ದು, ಸತತ ಆರನೇ ಬಾರಿಗೆ ರಾಜಗಾಂಭೀರ್ಯದಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಅಭಿಮನ್ಯು ಸೇರಿ ಇತರ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ದಸರಾ ಗಜಪಡೆ
ಅಂಬಾರಿ ಆನೆ : ಕ್ಯಾಪ್ಟನ್ ಅಭಿಮನ್ಯು, 59 ವರ್ಷ, 6ನೇ ಬಾರಿ ಅಂಬಾರಿ
ಕುಮ್ಕಿ ಆನೆ : ಕಾವೇರಿ ಮತ್ತು ರೂಪ
ನಿಶಾನೆ ಆನೆ : ಧನಂಜಯ , 45 ವರ್ಷ
ನೌಪತ್ ಆನೆ : ಗೋಪಿ, 42 ವರ್ಷ
ಸಾಲಾನೆ : ಭೀಮ, 25 ವರ್ಷ
ಪಟ್ಟದ ಆನೆ : ಶ್ರೀಕಂಠ ಮತ್ತು ಲಕ್ಷ್ಮಿ
ಸಾಲಾನೆಗಳು: ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗದಲ್ಲಿ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago