ನವದೆಹಲಿ: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಮಿರಾಮ್ ಟ್ಯಾರೋನ್ ನನ್ನು ಚೀನಾ ಸೇನೆ ಭಾರತೀಯ ಸೇನೆಗೆ ಹಸ್ತಾಂತರಿಸಿದೆ.
ಯುವಕನ ಹಸ್ತಾಂತರ ಕುರಿತಂತೆ ಕೇಂದ್ರ ಸಚಿವ ಕಿರಣ್ ರಿಜಿಜು ಈ ಮಾಹಿತಿ ನೀಡಿದ್ದಾರೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅರುಣಾಚಲ ಪ್ರದೇಶದ ಯುವಕ ಮಿರಾಮ್ ಟ್ಯಾರೋನ್ ಅವರನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :
ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಭಾರತೀಯ ಸೇನೆಯು ಹಾಟ್ಲೈನ್ನಲ್ಲಿ ಚೀನಾ ಸೇನೆ ಜೊತೆಗೆ ಮಾತನಾಡಿದ್ದು, ಮಿರಾಮ್ ಟ್ಯಾರನ್ ಅವರನ್ನು ಶೀಘ್ರದಲ್ಲೇ ವಾಪಸ್ ಕಳುಹಿಸುವಂತೆ ಕೇಳಿತ್ತು. ಈಗ ನಮ್ಮ ಹುಡುಗ ಹಿಂತಿರುಗಿರುವುದು ನಮಗೆ ಸಂತೋಷ ತಂದಿದೆ ಎಂದು ಹೇಳಿದರು.
ಜನವರಿ 18 ರಂದು, ಮಿರಾಮ್ ಟ್ಯಾರೋನ್ ಅಪಹರಣದ ವರದಿಗಳು ಬೆಳಕಿಗೆ ಬಂದವು, ನಂತರ ಭಾರತೀಯ ಸೇನೆಯು ಪಿಎಲ್ಎ ಅನ್ನು ಸಂಪರ್ಕಿಸಿತು. ಶಿಯುಂಗ್ ಲಾ ಬಿಶಿಂಗ್ ಪ್ರದೇಶದಿಂದ ಬೇಟೆಯಾಡಲು ಹೊರಟಿದ್ದ ಮಿರಾಮ್ ಟ್ಯಾರೋನ್ ನಾಪತ್ತೆಯಾಗಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿತ್ತು. ಆತ ದಾರಿ ತಪ್ಪಿದ್ದರೆ ಅಥವಾ ತಮ್ಮ ವಶದಲ್ಲಿದ್ದರೆ, ಆತನನ್ನು ಪತ್ತೆ ಹಚ್ಚಿ ಭಾರತಕ್ಕೆ ತಕ್ಷಣ ಒಪ್ಪಿಸುವಂತೆ ಭಾರತೀಯ ಸೇನೆ ಚೀನಾ ಸೇನೆಗೆ ತಿಳಿಸಿತ್ತು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…