Featured

ಅರುಣ್ ಕುಮಾರ್ ಪುತ್ತಿಲ ಇರೋವರೆಗೂ ಯಾವ ಕಾರ್ಯಕರ್ತನಿಗೂ ತೊಂದರೆ ಆಗಲ್ಲ : ಹರ್ಷ ಸಹೋದರಿ ಅಶ್ವಿನಿ  – Vishwanews24 https://wp.me/p9KQap-kSH

ಪುತ್ತೂರು, : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಶಿವಮೊಗ್ಗದ ದಿ. ಹರ್ಷ ಸಹೋದರಿ ಅಶ್ವಿನಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಬಳಿಕ ದಿ.ಹರ್ಷ ಸಹೋದರಿ ಅಶ್ವಿನಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ, ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ.

ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಗೊಳಿಸಲು ಹೋರಾಡ್ತಾ ಇದ್ದಾರೆ, ಪ್ರತಿಯೊಬ್ಬರೂ ಕೂಡ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಕಾರ್ಯಕರ್ತರು‌ ಸಮಾಜಕ್ಕೆ ದ್ರೋಹ ಮಾಡ್ತಾ ಇಲ್ಲ, ಹಿಂದೂ ಕಾರ್ಯಕರ್ತರು ಯಾವತ್ತೂ ಕುಗ್ಗಲ್ಲ, ಈ ರೀತಿ ದೌರ್ಜನ್ಯ ಮಾಡ್ತಾ ಇದ್ರೆ ಹಿಂದೂ ಕಾರ್ಯಕರ್ತರು‌ ಬೆಳಿತಾರೆ ಹೊರತು ಕುಗ್ಗಲ್ಲ, ಅರುಣ್ ಕುಮಾರ್ ಪುತ್ತಿಲ ಇರೋವರೆಗೂ ಯಾವ ಕಾರ್ಯಕರ್ತನಿಗೂ ತೊಂದರೆ ಆಗಲ್ಲ.

ಪ್ರತಿಯೊಬ್ಬರಿಗೂ ಒಂದು‌ ಜೀವ ಅಮೂಲ್ಯವಾದದ್ದು, ಹಾಗಾಗಿ ದಯವಿಟ್ಟು ಈ ರೀತಿಯ ದೌರ್ಜನ್ಯ ಮಾಡೋದು ಸರಿಯಲ್ಲ, ರಾಜ್ಯದಲ್ಲಿ ಸುಮಾರು 36 ರಷ್ಟು‌ ಕಾರ್ಯಕರ್ತರು ಬಲಿಯಾಗಿದ್ದಾರೆ. ಈ ರೀತಿ ಒಬ್ಬ ಹೋದ್ರೆ ಸಾವಿರಾರು ಜನ ಹುಟ್ಟಿ ಬರ್ತಿವಿ, ಹಿಂದುತ್ವವನ್ನ ಬೆಳೆಸಿಕೊಳ್ಳುತ್ತೇವೆ ಹಿಂದುತ್ವದ ಮೂಲಕ‌ ಸಮಾಜವನ್ನ ಗಟ್ಟಿಗೊಳಿಸುತ್ತೇವೆ.

ಪುತ್ತೂರಿನಲ್ಲಿ ಆದಂತಹ ದೌರ್ಜನ್ಯ ಎಲ್ಲಿಯೂ ನಡೆದಿಲ್ಲ. ಮಾಡಿದವ್ರಿಗೂ ಮಕ್ಕಳು ಇರ್ತಾರೆ, ಮಾಡಿಸಲು‌ ಕುಮ್ಮಕ್ಕು ಕೊಟ್ಟವ್ರಿಗೂ ಮಕ್ಕಳು ಇದ್ದಾರೆ. ಪ್ರತಿಯೊಬ್ಬರಿಗೂ ನೋವಾಗುತ್ತೆ, ಇನ್ನು ಮುಂದೆ ಯಾದ್ರು ಅರ್ಥಮಾಡಿಕೊಂಡು ಬಾಳಿ ಸಮಾಜಕ್ಕೆ ಮಾದರಿಯಾಗಿರಿ. ಕೇಸರಿ ಶಾಲು ಹಾಕಿದ ಕೂಡಲೇ ಹಿಂದುತ್ವ ಆಗಲ್ಲ, ಅದನ್ನ‌ ಬುದ್ಧಿಯಲ್ಲಿಟ್ಟುಕೊಂಡು ಗಮನದಲ್ಲಿಟ್ಟುಕೊಂಡು ಹಿಂದುತ್ವಕ್ಕೆ ಕೆಲಸ ಮಾಡಿ ಎಂದು ದಿ. ಹರ್ಷ ಸಹೋದರಿ ಅಶ್ವಿನಿ ಹೇಳಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

14 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

14 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago