ಪುತ್ತೂರು, : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಶಿವಮೊಗ್ಗದ ದಿ. ಹರ್ಷ ಸಹೋದರಿ ಅಶ್ವಿನಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಬಳಿಕ ದಿ.ಹರ್ಷ ಸಹೋದರಿ ಅಶ್ವಿನಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ, ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ.
ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಗೊಳಿಸಲು ಹೋರಾಡ್ತಾ ಇದ್ದಾರೆ, ಪ್ರತಿಯೊಬ್ಬರೂ ಕೂಡ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಕಾರ್ಯಕರ್ತರು ಸಮಾಜಕ್ಕೆ ದ್ರೋಹ ಮಾಡ್ತಾ ಇಲ್ಲ, ಹಿಂದೂ ಕಾರ್ಯಕರ್ತರು ಯಾವತ್ತೂ ಕುಗ್ಗಲ್ಲ, ಈ ರೀತಿ ದೌರ್ಜನ್ಯ ಮಾಡ್ತಾ ಇದ್ರೆ ಹಿಂದೂ ಕಾರ್ಯಕರ್ತರು ಬೆಳಿತಾರೆ ಹೊರತು ಕುಗ್ಗಲ್ಲ, ಅರುಣ್ ಕುಮಾರ್ ಪುತ್ತಿಲ ಇರೋವರೆಗೂ ಯಾವ ಕಾರ್ಯಕರ್ತನಿಗೂ ತೊಂದರೆ ಆಗಲ್ಲ.
ಪ್ರತಿಯೊಬ್ಬರಿಗೂ ಒಂದು ಜೀವ ಅಮೂಲ್ಯವಾದದ್ದು, ಹಾಗಾಗಿ ದಯವಿಟ್ಟು ಈ ರೀತಿಯ ದೌರ್ಜನ್ಯ ಮಾಡೋದು ಸರಿಯಲ್ಲ, ರಾಜ್ಯದಲ್ಲಿ ಸುಮಾರು 36 ರಷ್ಟು ಕಾರ್ಯಕರ್ತರು ಬಲಿಯಾಗಿದ್ದಾರೆ. ಈ ರೀತಿ ಒಬ್ಬ ಹೋದ್ರೆ ಸಾವಿರಾರು ಜನ ಹುಟ್ಟಿ ಬರ್ತಿವಿ, ಹಿಂದುತ್ವವನ್ನ ಬೆಳೆಸಿಕೊಳ್ಳುತ್ತೇವೆ ಹಿಂದುತ್ವದ ಮೂಲಕ ಸಮಾಜವನ್ನ ಗಟ್ಟಿಗೊಳಿಸುತ್ತೇವೆ.
ಪುತ್ತೂರಿನಲ್ಲಿ ಆದಂತಹ ದೌರ್ಜನ್ಯ ಎಲ್ಲಿಯೂ ನಡೆದಿಲ್ಲ. ಮಾಡಿದವ್ರಿಗೂ ಮಕ್ಕಳು ಇರ್ತಾರೆ, ಮಾಡಿಸಲು ಕುಮ್ಮಕ್ಕು ಕೊಟ್ಟವ್ರಿಗೂ ಮಕ್ಕಳು ಇದ್ದಾರೆ. ಪ್ರತಿಯೊಬ್ಬರಿಗೂ ನೋವಾಗುತ್ತೆ, ಇನ್ನು ಮುಂದೆ ಯಾದ್ರು ಅರ್ಥಮಾಡಿಕೊಂಡು ಬಾಳಿ ಸಮಾಜಕ್ಕೆ ಮಾದರಿಯಾಗಿರಿ. ಕೇಸರಿ ಶಾಲು ಹಾಕಿದ ಕೂಡಲೇ ಹಿಂದುತ್ವ ಆಗಲ್ಲ, ಅದನ್ನ ಬುದ್ಧಿಯಲ್ಲಿಟ್ಟುಕೊಂಡು ಗಮನದಲ್ಲಿಟ್ಟುಕೊಂಡು ಹಿಂದುತ್ವಕ್ಕೆ ಕೆಲಸ ಮಾಡಿ ಎಂದು ದಿ. ಹರ್ಷ ಸಹೋದರಿ ಅಶ್ವಿನಿ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…