Featured

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ – vishwanews24

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ

ಜೂ.27ಕ್ಕೆ ವಿಚಾರಣೆ ಮುಂದೂಡಿಕೆ

ಪುತ್ತೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ.

ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್‌ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ಈ ಬಗ್ಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿ ವಾದ ಮಂಡಿಸಿದ್ದರು.

ಉಪವಿಭಾಗ ಅಧಿಕಾರಿಗಳ ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸದ ಕಾರಣ ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವೇಳೆ, ಇಂದು ಪುತ್ತೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನೋಟಿಸ್‌ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago